ಐವರು ನುಸುಳುಕೋರರನ್ನು ಕೊ*ದು ವೀರ ಮರಣವನ್ನಪ್ಪಿದ ಯೋಧ….

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮ ರಾಗಿದ್ದು, ಇವರು 2022 ಅಕ್ಟೋಬರ್ ನಲ್ಲಿ ಅಗ್ನಿವೀರ್ಗೆ ಆಯ್ಕೆಯಾಗಿ, ಮಹಾ ರಾಷ್ಟ್ರದ ನಾಸಿಕ್ನಲ್ಲಿ ಕರ್ತವ್ಯ ನಿರ್ವಹಿ ಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐದು ನುಸುಳುಕೋರರನ್ನು ಕೊ*ದು, ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.

ಮುರಳಿಯ ತಂದೆ ಶ್ರೀರಾಮ್ ನಾಯಕ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾ*ನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದು ಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯ ವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.
ಮುರಳಿ ನಮಗೆ ಒಬ್ಬನೇ ಮಗ. ಅವನಿಗೆ ಕೇವಲ 23 ವರ್ಷ. ನಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ದೇಶ ಸೇವೆ ಮಾಡಲು ಸೇನೆಗೆ ಸೇರುವುದು ಅವನ ಗುರಿಯಾಗಿತ್ತು. ನನ್ನ ವಿರೋಧದ ನಡುವೆಯೂ ಅವನು ಸೇನೆಗೆ ಸೇರಿದ್ದ. ಕನಿಷ್ಠ ಒಂದು ವರ್ಷ ಸೇನಾ ಸಮವಸ್ತ್ರ ಧರಿಸಲು ಬಯಸಿದ್ದ ಅವನು ತನ್ನ ಆಸೆ ಈಡೇರೆಸಿಕೊಂಡಿದ್ದ. ನಿನ್ನೆ ಬೆಳಗ್ಗೆ 8 ಗಂಟೆಗೆ ನಮ್ಮೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಿದ್ದ ಎಂದು ತಿಳಿಸಿದರು.

ಭಾರತ ಮಾತೆಗಾಗಿ ಹಾಗೂ ದೇಶದ ರಕ್ಷಣೆಗಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧನನ್ನು ಸಮಸ್ತ ನಾಡು ಗೌರವಿಸುತ್ತಿದ್ದು, ಇವರ ತ್ಯಾಗ ಬಲಿದಾನವನ್ನು ಶ್ಲಾಘಿಸುವುದರ ಜೊತೆಗೆ ವೀರ ಯೋಧನ ಮರಣಕ್ಕೆ ಸಾಂತ್ವಾನವನ್ನು ಸೂಚಿಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!