ಐವರು ನುಸುಳುಕೋರರನ್ನು ಕೊ*ದು ವೀರ ಮರಣವನ್ನಪ್ಪಿದ ಯೋಧ….

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮ ರಾಗಿದ್ದು, ಇವರು 2022 ಅಕ್ಟೋಬರ್ ನಲ್ಲಿ ಅಗ್ನಿವೀರ್ಗೆ ಆಯ್ಕೆಯಾಗಿ, ಮಹಾ ರಾಷ್ಟ್ರದ ನಾಸಿಕ್ನಲ್ಲಿ ಕರ್ತವ್ಯ ನಿರ್ವಹಿ ಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐದು ನುಸುಳುಕೋರರನ್ನು ಕೊ*ದು, ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.

ಮುರಳಿಯ ತಂದೆ ಶ್ರೀರಾಮ್ ನಾಯಕ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾ*ನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದು ಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯ ವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.
ಮುರಳಿ ನಮಗೆ ಒಬ್ಬನೇ ಮಗ. ಅವನಿಗೆ ಕೇವಲ 23 ವರ್ಷ. ನಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ದೇಶ ಸೇವೆ ಮಾಡಲು ಸೇನೆಗೆ ಸೇರುವುದು ಅವನ ಗುರಿಯಾಗಿತ್ತು. ನನ್ನ ವಿರೋಧದ ನಡುವೆಯೂ ಅವನು ಸೇನೆಗೆ ಸೇರಿದ್ದ. ಕನಿಷ್ಠ ಒಂದು ವರ್ಷ ಸೇನಾ ಸಮವಸ್ತ್ರ ಧರಿಸಲು ಬಯಸಿದ್ದ ಅವನು ತನ್ನ ಆಸೆ ಈಡೇರೆಸಿಕೊಂಡಿದ್ದ. ನಿನ್ನೆ ಬೆಳಗ್ಗೆ 8 ಗಂಟೆಗೆ ನಮ್ಮೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಿದ್ದ ಎಂದು ತಿಳಿಸಿದರು.

ಭಾರತ ಮಾತೆಗಾಗಿ ಹಾಗೂ ದೇಶದ ರಕ್ಷಣೆಗಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧನನ್ನು ಸಮಸ್ತ ನಾಡು ಗೌರವಿಸುತ್ತಿದ್ದು, ಇವರ ತ್ಯಾಗ ಬಲಿದಾನವನ್ನು ಶ್ಲಾಘಿಸುವುದರ ಜೊತೆಗೆ ವೀರ ಯೋಧನ ಮರಣಕ್ಕೆ ಸಾಂತ್ವಾನವನ್ನು ಸೂಚಿಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!