ಒಂದು ವಾರ ಐಪಿಎಲ್ ಸ್ಥಗಿತ ; ಬಿಸಿಸಿಐ ಅಧಿಕೃತ ಆದೇಶ ….

2025ರ ಐಪಿಎಲ್ ಸೀಸನ್ 18 ರ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಈ ನಿರ್ಧಾರವನ್ನು ಎಲ್ಲಾ ತಂಡಗಳೊಂದಿಗೆ ಸಮಾಲೋಚನೆಯ ನಂತರ ತೆಗೆದುಕೊಳ್ಳಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ನಿನ್ನೆಯಿಂದ ಹರಿದಾಡುತ್ತಿದ್ದ ಸುದ್ದಿ ಇದೀಗ ನಿಜವಾಗಿದೆ. ಮಿಲಿಯನ್ ಡಾಲರ್ ಟೂರ್ನಿ 2025 ರ ಐಪಿಎಲ್ ಅನ್ನು ಒಂದು ವಾರದವರೆಗೆ ಮುಂದೂಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಮಾಹಿತಿ ನೀಡಿದೆ. ಇದರರ್ಥ ವಾರದ ನಂತರ ಪರಿಸ್ಥಿತಿ ತಿಳಿಕೊಂಡರೆ ಐಪಿಎಲ್ ದ್ವಿತೀಯಾರ್ಧ ವಾರದ ನಂತರ ಆರಂಭವಾಗಲಿದೆ. ಇದು ಭಾರತದಲೇ ಮುಂದುವರೆಯಲಿದೆಯೋ ಅಥವಾ ವಿದೇಶವನ್ನು ಆಯ್ಕೆ ಮಾಡಲಾಗುತ್ತದೋ ಎಂಬುದು ವಾರದ ಬಳಿಕ ತಿಳಿಯಲಿದೆ. 2025 ರ ಐಪಿಎಲ್ ಪಂದ್ಯಾವಳಿಯನ್ನು ಕೇವಲ ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿಯೇ ಮಾಹಿತಿ ನೀಡಿದೆ.

ಮುಂದಿನ ವಾರ ಐಪಿಎಲ್ನ ಹೊಸ ವೇಳಾಪಟ್ಟಿ ಬಿಡುಗಡೆಯಾಗಬಹುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಐಪಿಎಲ್ ಅನ್ನು ಇನ್ನೂ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿಲ್ಲ. ಇದನ್ನು ಕೇವಲ ಒಂದು ವಾರದ ಕಾಲ ಮುಂದೂಡಲಾಗಿದೆ. ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಹೊಸ ವೇಳಾಪಟ್ಟಿಯನ್ನು ಮತ್ತೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಿರುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ‘ಐಪಿಎಲ್ ಆಡಳಿತ ಮಂಡಳಿಯು ಎಲ್ಲಾ ತಂಡಗಳೊಂದಿಗೆ ಸೂಕ್ತ ಸಮಾಲೋಚನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫ್ರಾಂಚೈಸಿಗಳು ತಮ್ಮ ಆಟಗಾರರ ಕಾಳಜಿ ಮತ್ತು ಭಾವನೆಗಳನ್ನು ಹಾಗೂ ಪ್ರಸಾರಕರು, ಪ್ರಾಯೋಜಕರು ಮತ್ತು ಅಭಿಮಾನಿಗಳ ಅಭಿಪ್ರಾಯಗಳನ್ನು ಹಂಚಿಕೊಂಡಿವೆ. ನಮ್ಮ ಸಶಸ್ತ್ರ ಪಡೆಗಳ ಬಲ ಮತ್ತು ಸನ್ನದ್ಧತೆಯ ಬಗ್ಗೆ ಬಿಸಿಸಿಐಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಎಲ್ಲಾ ಪಾಲುದಾರರ ಸಾಮೂಹಿಕ ಹಿತಾಸಕ್ತಿಯಿಂದ ಈ ನಿರ್ಧಾರ ತೆಗೆದುಕೊಳ್ಳುವುದು ಸರಿ ಎಂದು ಮಂಡಳಿ ಭಾವಿಸಿದೆ ಎಂದು ಐಪಿಎಲ್ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!