ಒಂದು ವಾರ ಐಪಿಎಲ್ ಸ್ಥಗಿತ ; ಬಿಸಿಸಿಐ ಅಧಿಕೃತ ಆದೇಶ ….

2025ರ ಐಪಿಎಲ್ ಸೀಸನ್ 18 ರ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಈ ನಿರ್ಧಾರವನ್ನು ಎಲ್ಲಾ ತಂಡಗಳೊಂದಿಗೆ ಸಮಾಲೋಚನೆಯ ನಂತರ ತೆಗೆದುಕೊಳ್ಳಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ನಿನ್ನೆಯಿಂದ ಹರಿದಾಡುತ್ತಿದ್ದ ಸುದ್ದಿ ಇದೀಗ ನಿಜವಾಗಿದೆ. ಮಿಲಿಯನ್ ಡಾಲರ್ ಟೂರ್ನಿ 2025 ರ ಐಪಿಎಲ್ ಅನ್ನು ಒಂದು ವಾರದವರೆಗೆ ಮುಂದೂಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಮಾಹಿತಿ ನೀಡಿದೆ. ಇದರರ್ಥ ವಾರದ ನಂತರ ಪರಿಸ್ಥಿತಿ ತಿಳಿಕೊಂಡರೆ ಐಪಿಎಲ್ ದ್ವಿತೀಯಾರ್ಧ ವಾರದ ನಂತರ ಆರಂಭವಾಗಲಿದೆ. ಇದು ಭಾರತದಲೇ ಮುಂದುವರೆಯಲಿದೆಯೋ ಅಥವಾ ವಿದೇಶವನ್ನು ಆಯ್ಕೆ ಮಾಡಲಾಗುತ್ತದೋ ಎಂಬುದು ವಾರದ ಬಳಿಕ ತಿಳಿಯಲಿದೆ. 2025 ರ ಐಪಿಎಲ್ ಪಂದ್ಯಾವಳಿಯನ್ನು ಕೇವಲ ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿಯೇ ಮಾಹಿತಿ ನೀಡಿದೆ.

ಮುಂದಿನ ವಾರ ಐಪಿಎಲ್ನ ಹೊಸ ವೇಳಾಪಟ್ಟಿ ಬಿಡುಗಡೆಯಾಗಬಹುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಐಪಿಎಲ್ ಅನ್ನು ಇನ್ನೂ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿಲ್ಲ. ಇದನ್ನು ಕೇವಲ ಒಂದು ವಾರದ ಕಾಲ ಮುಂದೂಡಲಾಗಿದೆ. ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಹೊಸ ವೇಳಾಪಟ್ಟಿಯನ್ನು ಮತ್ತೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಿರುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ‘ಐಪಿಎಲ್ ಆಡಳಿತ ಮಂಡಳಿಯು ಎಲ್ಲಾ ತಂಡಗಳೊಂದಿಗೆ ಸೂಕ್ತ ಸಮಾಲೋಚನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫ್ರಾಂಚೈಸಿಗಳು ತಮ್ಮ ಆಟಗಾರರ ಕಾಳಜಿ ಮತ್ತು ಭಾವನೆಗಳನ್ನು ಹಾಗೂ ಪ್ರಸಾರಕರು, ಪ್ರಾಯೋಜಕರು ಮತ್ತು ಅಭಿಮಾನಿಗಳ ಅಭಿಪ್ರಾಯಗಳನ್ನು ಹಂಚಿಕೊಂಡಿವೆ. ನಮ್ಮ ಸಶಸ್ತ್ರ ಪಡೆಗಳ ಬಲ ಮತ್ತು ಸನ್ನದ್ಧತೆಯ ಬಗ್ಗೆ ಬಿಸಿಸಿಐಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಎಲ್ಲಾ ಪಾಲುದಾರರ ಸಾಮೂಹಿಕ ಹಿತಾಸಕ್ತಿಯಿಂದ ಈ ನಿರ್ಧಾರ ತೆಗೆದುಕೊಳ್ಳುವುದು ಸರಿ ಎಂದು ಮಂಡಳಿ ಭಾವಿಸಿದೆ ಎಂದು ಐಪಿಎಲ್ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!