ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.!

ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19 ಟಿ20 ವಿಶ್ವ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ. ಭಾನುವಾರ ಇಲ್ಲಿನ ಬೇಯು ಮಾಸ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ಗಳಲ್ಲಿ 82 ರನ್ ಗಳಿಸಿ ಸರ್ವಪತನ ಕಂಡಿತು.

ದಕ್ಷಿಣ ಆಫ್ರಿಕಾ ನೀಡಿದ 83 ರನ್ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 11.2 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಗುರಿ ತಲುಪಿತು. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಜೇಯ ತಂಡಗಳಾಗಿ ಫೈನಲ್ ಪ್ರವೇಶಿಸಿದ್ದವು. ಅಂತಿಮ ಹಣಾಹಣಿ 1ur ಯಲ್ಲಿ ಮೊದಲು ಬ್ಯಾಟ್ ಮಾಡಿದದ.
ಆಫ್ರಿಕಾ ಆಟಗಾರರು ನಿರೀಕ್ಷೆಗೆ ತಕ್ಕ ಬ್ಯಾಟ್ ಬೀಸುವಲ್ಲಿ ವಿಫಲರಾಗಿ ಭಾರತೀ ಯರ ಬೌಲಿಂಗ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ದಕ್ಷಿಣ ಆಫ್ರಿಕಾ ಪರ ಮೀಕೆ ವ್ಯಾನ್ ವೂರ್ಸ್ಟ್ 23, ಜೆಮ್ಮಾ ಬೋಥಾ 16, ಫೇ ಕೌಲಿಂಗ್ 15, ಕರಾಬೊ ಮೆಸೊ 10 ರನ್ ಗಳಿಸಿದ್ದು ಬಟ್ಟರೇ ಉಳಿದವರು ಎರಡಂಕಿ ಮೊತ್ತ ದಾಖಲಿಸಲು ಸಾಧ್ಯವಾಗದೇ ಪರದಾಡಿ ದರು. ಅಂತಿಮವಾಗಿ ಡಿಯಾರಾ ರಾಮ್ಲಕಾನ್ 3. ಕೈಲಾ ರೇನಕೆ 7 ರನ್ ಗಳಿಸಿದರು. ಭಾರತದ ಪರ ಗೊಂಗಡಿ ತ್ರಿಶಾ 3, ವೈಷ್ಣವಿ ಶರ್ಮಾ, ಆಯುಷಿ ಶುಕ್ರಾಮತ್ತು ಪಾರುಣಿಕ ಸಿಸೋಡಿಯಾ ತಲಾ 2 ವಿಕೆಟ್ ಪಡೆದು ಮಿಂಚಿದರು. ಶಬ್ಬಮ್ ಶಕೀಲ್ 1 ವಿಕೆಟ್ ಕಬಳಿಸಿದರು.

ದಕ್ಷಿಣ ಆಫ್ರಿಕಾ ನೀಡಿದ ಸಾಧಾರಣ ಗುರಿ ಬೆನ್ನತ್ತಿದ ಭಾರತ, ತಂಡದ ಮೊತ್ತ 36 ರನ್ ಆಗಿದ್ದ ವೇಳೆ 8 ರನ್ ಗಳಿಸಿದ್ದ ಜಿ.ಕಮಲಿನಿ ಅವರ ವಿಕೆಟ್ ಕಳೆದು ಕೊಂಡು ಆರಂಭಿಕ ಆಘಾತ ಎದುರಿಸಿ ತು. ಬಳಿಕ 2ನೇ ವಿಕೆಟ್ಗೆ ಜೊತೆಯಾದ ಗೊಂಗಡಿ ತ್ರಿಶಾ ಮತ್ತು ಸಾನಿಕಾ ಚಲ್ಕೆ 48 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೊಂಗಡಿ ತ್ರಿಷಾ 44, ಸಾನಿಕಾ ಚಲೈ 26 ರನ್ ಗಳಿಸಿ ಅಜೇಯ ರಾಗುಳಿದರು. ದಕ್ಷಿಣ ಆಫ್ರಿಕಾ ಪರ ಕೈಲಾ ರೇನಕೆ ಒಂದು ವಿಕೆಟ್ ಕಬಳಿಸಿದರು. ಪಂದ್ಯ ಹಾಗೂ ಸರಣಿಯಲ್ಲಿ
ಅತ್ಯುತ್ತಮ ಪ್ರದರ್ಶನ ನೀಡಿದ ತ್ರಿಶಾ ಪಂದ್ಯಶ್ರೇಷ್ಠ ಹಾಗೂ
ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಾನವೀಯತೆ ಮೆರೆದ ಶಾಸಕ ಅನಿಲ್ ಚಿಕ್ಕಮಾದು2023ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತೀಯ ಮಹಿಳಾ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇಂಗ್ಲೆಂಡ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಭಾರತ ತಂಡವನ್ನು ಕರ್ನಾಟಕದ ನಿಕಿ ಪ್ರಸಾದ್ ಮುನ್ನಡೆಸಿದ್ದು, ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 19 ವರ್ಷದೊಳಗಿನ ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ನಿಕಿ 18 ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 41 ರನ್ ಗಳಿಂದ ಮಣಿಸಿ ತಂಡವನ್ನು ಚಾಂಪಿ ಯನ್ ಪಟ್ಟಕ್ಕೇರಿಸಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!