ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.!

ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19 ಟಿ20 ವಿಶ್ವ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ. ಭಾನುವಾರ ಇಲ್ಲಿನ ಬೇಯು ಮಾಸ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ಗಳಲ್ಲಿ 82 ರನ್ ಗಳಿಸಿ ಸರ್ವಪತನ ಕಂಡಿತು.

ದಕ್ಷಿಣ ಆಫ್ರಿಕಾ ನೀಡಿದ 83 ರನ್ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 11.2 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಗುರಿ ತಲುಪಿತು. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಜೇಯ ತಂಡಗಳಾಗಿ ಫೈನಲ್ ಪ್ರವೇಶಿಸಿದ್ದವು. ಅಂತಿಮ ಹಣಾಹಣಿ 1ur ಯಲ್ಲಿ ಮೊದಲು ಬ್ಯಾಟ್ ಮಾಡಿದದ.
ಆಫ್ರಿಕಾ ಆಟಗಾರರು ನಿರೀಕ್ಷೆಗೆ ತಕ್ಕ ಬ್ಯಾಟ್ ಬೀಸುವಲ್ಲಿ ವಿಫಲರಾಗಿ ಭಾರತೀ ಯರ ಬೌಲಿಂಗ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ದಕ್ಷಿಣ ಆಫ್ರಿಕಾ ಪರ ಮೀಕೆ ವ್ಯಾನ್ ವೂರ್ಸ್ಟ್ 23, ಜೆಮ್ಮಾ ಬೋಥಾ 16, ಫೇ ಕೌಲಿಂಗ್ 15, ಕರಾಬೊ ಮೆಸೊ 10 ರನ್ ಗಳಿಸಿದ್ದು ಬಟ್ಟರೇ ಉಳಿದವರು ಎರಡಂಕಿ ಮೊತ್ತ ದಾಖಲಿಸಲು ಸಾಧ್ಯವಾಗದೇ ಪರದಾಡಿ ದರು. ಅಂತಿಮವಾಗಿ ಡಿಯಾರಾ ರಾಮ್ಲಕಾನ್ 3. ಕೈಲಾ ರೇನಕೆ 7 ರನ್ ಗಳಿಸಿದರು. ಭಾರತದ ಪರ ಗೊಂಗಡಿ ತ್ರಿಶಾ 3, ವೈಷ್ಣವಿ ಶರ್ಮಾ, ಆಯುಷಿ ಶುಕ್ರಾಮತ್ತು ಪಾರುಣಿಕ ಸಿಸೋಡಿಯಾ ತಲಾ 2 ವಿಕೆಟ್ ಪಡೆದು ಮಿಂಚಿದರು. ಶಬ್ಬಮ್ ಶಕೀಲ್ 1 ವಿಕೆಟ್ ಕಬಳಿಸಿದರು.

ದಕ್ಷಿಣ ಆಫ್ರಿಕಾ ನೀಡಿದ ಸಾಧಾರಣ ಗುರಿ ಬೆನ್ನತ್ತಿದ ಭಾರತ, ತಂಡದ ಮೊತ್ತ 36 ರನ್ ಆಗಿದ್ದ ವೇಳೆ 8 ರನ್ ಗಳಿಸಿದ್ದ ಜಿ.ಕಮಲಿನಿ ಅವರ ವಿಕೆಟ್ ಕಳೆದು ಕೊಂಡು ಆರಂಭಿಕ ಆಘಾತ ಎದುರಿಸಿ ತು. ಬಳಿಕ 2ನೇ ವಿಕೆಟ್ಗೆ ಜೊತೆಯಾದ ಗೊಂಗಡಿ ತ್ರಿಶಾ ಮತ್ತು ಸಾನಿಕಾ ಚಲ್ಕೆ 48 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೊಂಗಡಿ ತ್ರಿಷಾ 44, ಸಾನಿಕಾ ಚಲೈ 26 ರನ್ ಗಳಿಸಿ ಅಜೇಯ ರಾಗುಳಿದರು. ದಕ್ಷಿಣ ಆಫ್ರಿಕಾ ಪರ ಕೈಲಾ ರೇನಕೆ ಒಂದು ವಿಕೆಟ್ ಕಬಳಿಸಿದರು. ಪಂದ್ಯ ಹಾಗೂ ಸರಣಿಯಲ್ಲಿ
ಅತ್ಯುತ್ತಮ ಪ್ರದರ್ಶನ ನೀಡಿದ ತ್ರಿಶಾ ಪಂದ್ಯಶ್ರೇಷ್ಠ ಹಾಗೂ
ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಾನವೀಯತೆ ಮೆರೆದ ಶಾಸಕ ಅನಿಲ್ ಚಿಕ್ಕಮಾದು2023ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತೀಯ ಮಹಿಳಾ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇಂಗ್ಲೆಂಡ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಭಾರತ ತಂಡವನ್ನು ಕರ್ನಾಟಕದ ನಿಕಿ ಪ್ರಸಾದ್ ಮುನ್ನಡೆಸಿದ್ದು, ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 19 ವರ್ಷದೊಳಗಿನ ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ನಿಕಿ 18 ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 41 ರನ್ ಗಳಿಂದ ಮಣಿಸಿ ತಂಡವನ್ನು ಚಾಂಪಿ ಯನ್ ಪಟ್ಟಕ್ಕೇರಿಸಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು