ಕನ್ನಡ ಬಿಗ್ ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಬಂಧನ.

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಅವರ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್ ಜಗದೀಶ್ರನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಇತ್ತೀಚೆಗೆ ಅಣ್ಣಮ್ಮ ದೇವಿ ಕೂರಿಸುವ ವಿಚಾರಕ್ಕೆ ಕಿರಿಕ್ ಆಗಿತ್ತು. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಅಣ್ಣಮ್ಮ ದೇವಿಯನ್ನು ಕೋರಿಸಿದ್ದನ್ನು ಜಗದೀಶ್ ಪ್ರಶ್ನೆ ಮಾಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಘಟನೆ ಸಂಬಂಧ ಪ್ರತಿಕ್ರಿಯಿಸುವಾಗ ಅವರು ಆವಾಜ್ ಹಾಕಿದ್ದರು. ದರ್ಶನ್ ಅಭಿಮಾನಿಗಳನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದರು. ‘ಈ ಕೆಲಸ ಮಾಡಿದ್ದು ದರ್ಶನ್ ಅಭಿಮಾನಿಗಳಂತೆ. ನನ್ನ ಬಳಿ ಬರುವಾಗ ವಿಮೆ ಮಾಡಿಸಿಕೊಂಡು ಬನ್ನಿ’ ಎಂದಿದ್ದರು.

ಈ ಬೆನ್ನಲ್ಲೇ ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಅಟ್ಯಾಕ್ ಆಗಿದೆ. ಕೆಲವರು ಕೋಲು ದೊಣ್ಣೆ ತೆಗೆದುಕೊಂಡು ಬಂದು ಜಗದೀಶ್ ಅವರ ಕಾರನ್ನು ಪೀಸ್ ಪೀಸ್ ಮಾಡಿದ್ದಾರೆ. ಜಗದೀಶ್ ಅವರ ಮೇಲೆ ಹಲ್ಲೆ ಮಾಡಲಾಗಿತ್ತು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!