ಕರ್ತವ್ಯ ನಿರತ ಪೊಲೀಸರೊಂದಿಗೆ ಅನುಚಿತ ವರ್ತನೆ, ಇಬ್ಬರ ವಿರುದ್ದ FIR ದಾಖಲು.

ಕರ್ತವ್ಯನಿರತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ FIR ದಾಖಲಾಗಿದೆ.

ನಿನ್ನೆ ತಡರಾತ್ರಿ ವೇಳೆ ಮರಿಸ್ವಾಮಿ ಹಾಗೂ ಮತ್ತೊಬ್ಬ ವ್ಯಕ್ತಿ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಹೋಟೆಲ್ ಒಂದರ ಬಳಿ ಸ್ಕೂಟರ್ ಜೊತೆ ನಿಂತಿದ್ದಾರೆ.ಸ್ಕೂಟರ್ ಗೆ ನಂಬರ್ ಪ್ಲೇಟ್ ಹಾಕಿರಲಿಲ್ಲ.ಈ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ವಿವಿಪುರಂ ಠಾಣೆಯ ಪೇದೆಗಳಾದ ರೆಹಮಾನ್ ಮತ್ತು ಕೌಶಿಕ್ ರವರು ಪ್ರಶ್ನಿಸಿದ್ದಾರೆ.ಪೊಲೀಸರ ಪ್ರಶ್ನೆಗೆ ಕೆರಳಿದ ಮರಿಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಳ್ಳುವಾಗ ಕಿತ್ತುಕೊಳ್ಳಲು ಬಂದಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿ ಬರುತ್ತಿದ್ದಾರೆ ಇಲ್ಲೇ ಇರುವಂತೆ ತಾಕೀತು ಮಾಡುತ್ತಿದ್ದರೂ ಓಡಿಹೋಗುವ ಪ್ರಯತ್ನ ಮಾಡಿದ್ದಾರೆ.ಕೊನೆಗೆ ಪೊಲೀಸರು ಚೇಸ್ ಮಾಡಿ ಮರಿಸ್ವಾಮಿಯನ್ನ ಹಿಡಿದಿದ್ದಾರೆ.ಯಾವ ಪೊಲೀಸ್ ಏನು ಮಾಡಲು ಸಾಧ್ಯವಿಲ್ಲ ಎಂದು ಮರಿಸ್ವಾಮಿ ಧಂಕಿ ಹಾಕಿರುವುದಾಗಿ ಸಿಬ್ಬಂದಿಗಳು ಆರೋಪಿಸಿದ್ದಾರೆ.ಈ ಸಂಭಂಧ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ಸಿಬ್ಬಂದಿಗಳಾದ ರೆಹಮಾನ್ ಹಾಗೂ ಕೌಶಿಕ್ ರವರು ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!