ಕರ್ನಾಟಕದ ಸಾಕಮ್ಮ ಹಿಮಾಚಲದಲ್ಲಿ ಪತ್ತೆ: 20 ವರ್ಷಗಳ ಬಳಿಕ ರಾಜ್ಯಕ್ಕೆ ಕರೆತರುತ್ತಿದೆ ಅಧಿಕಾರಿಗಳ ತಂಡ .

ಹಿಮಾಚಲ ಪ್ರದೇಶ: 20 ವರ್ಷಗಳ ನಂತರ ಕರ್ನಾಟಕದ ಮಹಿಳೆ ಹಿಮಾಚಲ ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ಇದು ಸಿನಿಮಾ ಕಥೆಯಲ್ಲ. ಹಿಮಾಚಲ ಸರ್ಕಾರದ ಅಧಿಕಾರಿಯೊಬ್ಬರ ಸತತ ಪ್ರಯತ್ನ ಇಂದು ಆ ವೃದ್ಧೆಯನ್ನು ತನ್ನ ಕೊನೆಗಾಲದಲ್ಲಿ ಕುಟುಂಬವನ್ನು ಸೇರುವಂತೆ ಮಾಡಿದೆ. ಮಹಿಳೆಯ ಪುಣ್ಯವೋ, ಆಕೆಯ ಮಕ್ಕಳ ಭಾಗ್ಯವೋ ಸದ್ಯ ನಿನ್ನೆ ಕರ್ನಾಟಕದ ತನ್ನ ಮನೆಗೆ ಮಹಿಳೆ ಸುರಕ್ಷಿತವಾಗಿ ಸೇರಿಕೊಂಡಿದ್ದಾರೆ.
ಈ ಮಹಿಳೆಯ ಹೆಸರು ಸಾಕಮ್ಮ. ಮೊದಲೇ ಹೇಳಿದಂತೆ 20 ವರ್ಷಗಳ ಹಿಂದೆ ತನ್ನ ಮನೆ, ಪತಿ, ಮಕ್ಕಳಿಂದ ದೂರವಾಗಿದ್ದರು. ಇಷ್ಟು ದೀರ್ಘ ಸಮಯದ ನಂತರ ಮಹಿಳೆ ಪತ್ತೆಯಾಗಿದ್ದರೂ ಹೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ.
ಡಿಸೆಂಬರ್ 18 ರಂದು ಮಂಡಿಯ ಎಡಿಸಿ ರೋಹಿತ್ ರಾಥೋಡ್ ಅವರು ಜಿಲ್ಲೆಯ ವೃದ್ಧಾಶ್ರಮವಾದ ಭಂಗ್ರೋಟುಗೆ ತಪಾಸಣೆಗೆ ಎಂದು ಬಂದಿದ್ದರು. ಅಲ್ಲಿ ವೃದ್ಧಾಶ್ರಮದ ದಾಖಲೆಗಳಲ್ಲಿ ಸಾಕಮ್ಮ ಎಂಬ ಒಬ್ಬ ವೃದ್ಧಯನ್ನು ಕಂಡಿದ್ದಾರೆ.

ಈ ವೇಳೆ ಮಹಿಳೆ ಮೂಲತಃ ಕರ್ನಾಟಕದವರಾಗಿದ್ದು, ಹಿಂದಿ ಮಾತನಾಡುವುದಿಲ್ಲ ಎಂದು ತಿಳಿದು ಬಂದಿದೆ. ತಕ್ಷಣ ಅಧಿಕಾರಿ ಜಿಲ್ಲೆಯ ಇತರ ಅಧಿಕಾರಿಗಳೊಂದಿಗೆ ಮಾತನಾಡಿ ಸಾಕಮ್ಮನನ್ನು ಆಕೆಯ ಮನೆಗೆ ಕಳುಹಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಮೊದಲು ಹಿಮಾಚಲದಲ್ಲಿನ ಕರ್ನಾಟಕದ ಅಧಿಕಾರಿಗಳ ಸಹಾಯ ಪಡೆದು ಸಾಕಮ್ಮನ ಜೊತೆ ಮಾತನಾಡುವಂತೆ ಮಾಡಿದ್ದಾರೆ.
ಕರ್ನಾಟಕದ ನಿವಾಸಿಯಾದ ಹಿಮಾಚಲದ ಕಂಗ್ರಾ ಜಿಲ್ಲೆಯ ಪಾಲಂಪೂರ್ನ ಎಸ್ಡಿಎಂ ನೇತ್ರಾ ಮೈತಿ ಸಾಕಮ್ಮನೊಂದಿಗೆ ದೂರವಾಣಿ ಮೂಲಕ ಕನ್ನಡದಲ್ಲಿ ಮಾತನಾಡಿ, ಆಕೆಯ ಮನೆಯ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ಮಂಡಿ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದ ಐಪಿಎಸ್ ಪ್ರೊಬೇಷನರ್ ಅಧಿಕಾರಿ ರವಿ ನಂದನ್ ಅವರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಮೂಲಕ ಮತ್ತೊಮ್ಮೆ ಸಾಕಮ್ಮ ಅವರನ್ನು ಮಾತನಾಡಿಸಿದ್ದಾರೆ. ಈ ಮಹಿಳೆಯ ವಿಡಿಯೋವನ್ನು ಮಾಡಿ ಕರ್ನಾಟಕದ ಅಧಿಕಾರಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಬಳಿಕ ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ಅಧಿಕಾರಿಗಳ ಪ್ರಯತ್ನದಿಂದ ಸಾಕಮ್ಮನ ಕುಟುಂಬ ಪತ್ತೆಯಾಗಿದೆ. ಸಾಕಮ್ಮ ಕರ್ನಾಟಕದ ವಿಜಯನಗರ ಜಿಲ್ಲೆಯ ಡಣಾಯಕನಕೆರೆ ಗ್ರಾಮದ ನಿವಾಸಿಯೆಂದು ತಿಳಿದು ಬಂತು. ನಿಖರ ಮಾಹಿತಿ ಬಳಿಕ ಕರ್ನಾಟಕದ ಅಧಿಕಾರಿಗಳ ತಂಡವು ಸಾಕಮ್ಮನನ್ನು ಅವರ ಮನೆಗೆ ಕರೆದೊಯ್ಯಲು ಹಿಮಾಚಲಕ್ಕೆ ಆಗಮಿಸಿತು.
ಮಂಡಿ ಜಿಲ್ಲಾಧಿಕಾರಿ ಅಪೂರ್ವ ದೇವಗನ್ ಮಾತನಾಡಿ, “ವೃದ್ಧಾಶ್ರಮ, ಅನಾಥಾಶ್ರಮಗಳನ್ನು ಕಾಲಕಾಲಕ್ಕೆ ತಪಾಸಣೆ ಮಾಡಲಾಗುತ್ತಿದ್ದು, ಇತ್ತೀಚೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಂದ ಭಂಗ್ರೋಟು ಅನಾಥಾಶ್ರಮವನ್ನು ಪರಿಶೀಲನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರು ಕರ್ನಾಟಕದ ಮಹಿಳೆಯೊಂದಿಗೆ ಮಾತನಾಡಿದ್ದಾರೆ. ಆದರೆ ಅವರ ವಿಳಾಸ ಗೊತ್ತಾಗಿರಲಿಲ್ಲ . ನಂತರ ಜಿಲ್ಲಾಡಳಿತ ಕರ್ನಾಟಕದ ಅಧಿಕಾರಿಗಳ ಜೊತೆ ಸೇರಿ ವೃದ್ಧೆಯನ್ನ ಮನೆಗೆ ಕಳುಹಿಸಲು ಪ್ರಯತ್ನ ಮಾಡಿದೆವು, ಅದು ಕೊನೆಗೆ ಯಶಸ್ವಿಯಾಗಿದೆ” ಎಂದು ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು