ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ ಕಾಟ ತಾಳಲಾರದೆ ನೊಂದ ಪತಿ ಪೊಲೀಸರ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಗರದ ವಿಶ್ವಕರ್ಮ ನಗರದಲ್ಲಿ 45 ವರ್ಷದ ಮಹಿಳೆಯೊಬ್ಬರು 61 ವರ್ಷದ ತನ್ನ ಪತಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ಸುಮಾರು 12 ಸ್ಥಳಗಳಲ್ಲಿ ಕಚ್ಚಿ ಗಾಯಗೊಳಿಸಿದ್ದು, ತನ್ನ ಉಗುರುಗಳಿಂದ ಪರಚಿ ಹಿಂಸಿಸಿದ್ದಾರೆ. ಅಷ್ಟೇ ಅಲ್ಲದೆ ಅವನ ಮೇಲೆ ಆಸಿಡ್ ಕೂಡ ಎರಚಿದ್ದಾರೆ. ಆಸಿಡ್ ಆತನಿಗೆ ತಾಗದಿದ್ದರೂ, ಅವರ ಬಟ್ಟೆಗಳಿಗೆ ಆ್ಯಸಿಡ್ ತಾಗಿ ಹಾಳಾಗಿದೆ. ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ. ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ.
ವಿಶ್ವಕರ್ಮ ನಗರದಲ್ಲಿ ವಾಸವಾಗಿರುವ ಟ್ರಕ್ ಚಾಲಕ 61 ವರ್ಷದ ನಾರಾಯಣ ಲೋಧಿ ತನ್ನ ಎರಡನೇ ಪತ್ನಿ 45 ವರ್ಷದ ದುರ್ಗಾ ಲೋಧಿಯೊಂದಿಗೆ ವಾಸವಾಗಿದ್ದರು. ದುರ್ಗಾಗೆ ಮೊದಲ ಗಂಡನಿಂದ 12 ಮತ್ತು 14 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನಾರಾಯಣ ತಮ್ಮ ವೃತ್ತಿಯ ಕಾರಣದಿಂದ ವಾರಕ್ಕೆ ಒಂದು ಅಥವಾ ಎರಡು ಬಾರಿ ಮಾತ್ರ ಮನೆಗೆ ಬರುತ್ತಿದ್ದರು.
ಮನೆಯಲ್ಲಿ ಕೆಲವು ವಸ್ತುಗಳು ಕಾಣೆಯಾಗಿರುವ ಬಗ್ಗೆ ಅವರು ಪತ್ನಿಯೊಂದಿಗೆ ಜಗಳವಾಡಿದ್ದಾರೆ. ವಾಗ್ವಾದ ಎಷ್ಟರಮಟ್ಟಿಗೆ ಏರಿತೆಂದರೆ, ಮದ್ಯವ್ಯಸನಿಯಾಗಿದ್ದ ದುರ್ಗಾ ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಹಲವೆಡೆ ಕಚ್ಚಿ, ಪರಚಿದ್ದಾರೆ. ನಾರಾಯಣ ಓಡಿಹೋಗಲು ಯತ್ನಿಸಿದ್ದು, ದುರ್ಗಾ ಆತನ ಮೇಲೆ ಆಸಿಡ್ ಎರಚಿದ್ದಾಳೆ. ಅದೃಷ್ಟವಶಾತ್ ಆ್ಯಸಿಡ್ ನಾರಾಯಣ ಅವರ ಮೈಮೇಲೆ ಬೀಳದೆ ಬಟ್ಟೆ ಮೇಲೆ ಬಿದ್ದಿದೆ. ಇದರಿಂದ ಅವರ ಬಟ್ಟೆ ಸ್ವಲ್ಪ ಸುಟ್ಟಿದೆ.

ದುರ್ಗಾಗೆ ಕುಡಿತದ ಚಟವಿದೆ ಎಂದು ನಾರಾಯಣ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಆಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದಿದ್ದಾರೆ. ದುರ್ಗಾ ವಿರುದ್ಧ ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ. ಹೀಗಾಗಿ, ಆಕೆಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!