ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ ಕಾಟ ತಾಳಲಾರದೆ ನೊಂದ ಪತಿ ಪೊಲೀಸರ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಗರದ ವಿಶ್ವಕರ್ಮ ನಗರದಲ್ಲಿ 45 ವರ್ಷದ ಮಹಿಳೆಯೊಬ್ಬರು 61 ವರ್ಷದ ತನ್ನ ಪತಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ಸುಮಾರು 12 ಸ್ಥಳಗಳಲ್ಲಿ ಕಚ್ಚಿ ಗಾಯಗೊಳಿಸಿದ್ದು, ತನ್ನ ಉಗುರುಗಳಿಂದ ಪರಚಿ ಹಿಂಸಿಸಿದ್ದಾರೆ. ಅಷ್ಟೇ ಅಲ್ಲದೆ ಅವನ ಮೇಲೆ ಆಸಿಡ್ ಕೂಡ ಎರಚಿದ್ದಾರೆ. ಆಸಿಡ್ ಆತನಿಗೆ ತಾಗದಿದ್ದರೂ, ಅವರ ಬಟ್ಟೆಗಳಿಗೆ ಆ್ಯಸಿಡ್ ತಾಗಿ ಹಾಳಾಗಿದೆ. ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ. ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ.
ವಿಶ್ವಕರ್ಮ ನಗರದಲ್ಲಿ ವಾಸವಾಗಿರುವ ಟ್ರಕ್ ಚಾಲಕ 61 ವರ್ಷದ ನಾರಾಯಣ ಲೋಧಿ ತನ್ನ ಎರಡನೇ ಪತ್ನಿ 45 ವರ್ಷದ ದುರ್ಗಾ ಲೋಧಿಯೊಂದಿಗೆ ವಾಸವಾಗಿದ್ದರು. ದುರ್ಗಾಗೆ ಮೊದಲ ಗಂಡನಿಂದ 12 ಮತ್ತು 14 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನಾರಾಯಣ ತಮ್ಮ ವೃತ್ತಿಯ ಕಾರಣದಿಂದ ವಾರಕ್ಕೆ ಒಂದು ಅಥವಾ ಎರಡು ಬಾರಿ ಮಾತ್ರ ಮನೆಗೆ ಬರುತ್ತಿದ್ದರು.
ಮನೆಯಲ್ಲಿ ಕೆಲವು ವಸ್ತುಗಳು ಕಾಣೆಯಾಗಿರುವ ಬಗ್ಗೆ ಅವರು ಪತ್ನಿಯೊಂದಿಗೆ ಜಗಳವಾಡಿದ್ದಾರೆ. ವಾಗ್ವಾದ ಎಷ್ಟರಮಟ್ಟಿಗೆ ಏರಿತೆಂದರೆ, ಮದ್ಯವ್ಯಸನಿಯಾಗಿದ್ದ ದುರ್ಗಾ ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಹಲವೆಡೆ ಕಚ್ಚಿ, ಪರಚಿದ್ದಾರೆ. ನಾರಾಯಣ ಓಡಿಹೋಗಲು ಯತ್ನಿಸಿದ್ದು, ದುರ್ಗಾ ಆತನ ಮೇಲೆ ಆಸಿಡ್ ಎರಚಿದ್ದಾಳೆ. ಅದೃಷ್ಟವಶಾತ್ ಆ್ಯಸಿಡ್ ನಾರಾಯಣ ಅವರ ಮೈಮೇಲೆ ಬೀಳದೆ ಬಟ್ಟೆ ಮೇಲೆ ಬಿದ್ದಿದೆ. ಇದರಿಂದ ಅವರ ಬಟ್ಟೆ ಸ್ವಲ್ಪ ಸುಟ್ಟಿದೆ.

ದುರ್ಗಾಗೆ ಕುಡಿತದ ಚಟವಿದೆ ಎಂದು ನಾರಾಯಣ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಆಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದಿದ್ದಾರೆ. ದುರ್ಗಾ ವಿರುದ್ಧ ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ. ಹೀಗಾಗಿ, ಆಕೆಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು