ಕೆಎಂಎಫ್​ನಿಂದ ನಂದಿನಿ ಹಾಲಿನ ದರ ಹೆಚ್ಚಳ

ನಾಳೆಯಿಂದಲೇ (ಜೂನ್ 26) ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ನಂದಿನಿ ಹಾಲಿನ ದರ ಎಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಕೆಲವು ತಿಂಗಳ ಹಿಂದೆ ಹೇಳಿದ್ದರು. ಆದರೆ, ಇದೀಗ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಹಾಲಿನ ದರ ಏರಿಕೆ ಮಾಡಲಾಗಿದೆ. ಇದು ಸಹಜವಾಗಿ ಮಧ್ಯಮ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಗುಜರಾತ್​ನ ಅಮುಲ್​ ಕಂಪನಿ ತನ್ನ ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್​​ಗೆ 2 ರೂ. ಹೆಚ್ಚಿಸಿತ್ತು. ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಅಮುಲ್​ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಗುಜರಾತ್​​ ಸಹಕಾರಿ ಹಾಕು ಮಾರುಕಟ್ಟೆ ಒಕ್ಕೂಟ ತಿಳಿಸಿತ್ತು.

ಅಮುಲ್​ ಕಂಪನಿಯ ಹಾಲಿನ ದರ ಏರಿಕೆ ರಾಜ್ಯದ ಜನರಿಗೆ ಅಷ್ಟೊಂದು ಪರಿಣಾಮ ಬೀರಿಲ್ಲ. ಆದರೆ ಕೆಎಂಎಫ್​​ನ ನಂದಿನಿ ಹಾಲಿನ ದರ ಏರಿಕೆ ರಾಜ್ಯದ ಜನರಿಗೆ ಬಿಸಿ ತುಪ್ಪವಾಗಿದೆ. ಇತ್ತೀಚಿಗಷ್ಟೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಸಿದ್ದ ರಾಜ್ಯ ಸರ್ಕಾರ ಇದೀಗ, ಹಾಲಿನ ದರ ಏರಿಸಿದ್ದು,ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

    ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!