ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ ಹೋಪ್ ಫೌಂಡೇಶನ್ ಮುಖ್ಯಸ್ಥ ವಿಜಯ್ ಕುಮಾರ್.

ಹೊಸ ವರ್ಷದ ಪ್ರಯುಕ್ತ ವಿಜಯ್ ಕುಮಾರ್ ಅವರು ತಮ್ಮ ದೇಹದ ಮೇಲೆ 5 ಕೆಜಿ ಚಿನ್ನವನ್ನು ಧರಿಸಿ ಬಂದು ತಿಮ್ಮಪ್ಪನ ದರ್ಶನ ಪಡೆದರು. ಎರಡೂ ಕೈ ಬೆರಳುಗಳಲ್ಲಿ ಉಂಗುರಗಳು, ಎರಡೂ ಕೈಗಳಲ್ಲಿ ಭಾರವಾದ ಬಳೆಗಳು, ಚಿನ್ನದ ಗಡಿಯಾರಗಳು ಮತ್ತು ಅವನ ಕುತ್ತಿಗೆಯ ಸುತ್ತ ಭಾರವಾದ ಚಿನ್ನದ ಆಭರಣಗಳನ್ನು ಧರಿಸಿದ್ದರು ಈ ವೇಳೆ ವಿಜಯ್ ಕುಮಾರ್ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳಲು ಭಕ್ತರು ಮುಗಿಬಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್, ಕಳೆದ ಮೂರು ವರ್ಷಗಳಿಂದ ಕುಟುಂಬ ಸದಸ್ಯರು ಹಾಗೂ ಹೋಪ್ ಫೌಂಡೇಶನ್ ಸದಸ್ಯರೊಂದಿಗೆ ದೇವರ ದರ್ಶನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಈ ಹಿಂದೆ ವಿಜಯ್ ಕುಮಾರ್ ಸುಮಾರು 10 ಕೆಜಿ ಚಿನ್ನಾಭರಣ ಧರಿಸಿ ದೇವರ ದರ್ಶನ ಪಡೆದಿದ್ದರು. ಇದೀಗ 5 ಕೆಜಿ ಚಿನ್ನಾಭರಣ ಧರಿಸಿ ದರ್ಶನ ಪಡೆದಿದ್ದಾರೆ. ಇದರ ಬೆಲೆ ಸುಮಾರು 3.5 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಬಂಗಾರದ ಮೇಲಿರುವ ತಮ್ಮ ಅತಿಯಾದ ಆಸಕ್ತಿಯಿಂದಾಗಿ ಬೃಹತ್ ಆಭರಣಗಳನ್ನು ಮಾಡಿಸಿಕೊಂಡಿದ್ದೇನೆಂದು ವಿಜಯ್ ಕುಮಾ‌ರ್ ಹೇಳಿದರು. ಅಂದಹಾಗೆ ವಿಜಯ್ ಕುಮಾರ್ ಅವರು ತೆಲಂಗಾಣ ಒಲಿಂಪಿಕ್ ಅಸೋಸಿಯೇಷನ್‌ನ ‘ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.
ಮೈಮೇಲೆ ಚಿನ್ನವನ್ನು ಹೊದ್ದುಕೊಂಡು ತಿರುಮಲಕ್ಕೆ ಬಂದಿದ್ದ ವಿಜಯ್ ಕುಮಾರ್ ಅವರನ್ನು ನೋಡಿ ಭಕ್ತರು ಆಶ್ಚರ್ಯಚಕಿತರಾದರು. ಸಾಮಾನ್ಯವಾಗಿ, ಒಬ್ಬ ವ್ಯಕ್ತಿ ಒಂದು ಅಥವಾ ಎರಡು ಚಿನ್ನದ ಸರಗಳನ್ನು ಧರಿಸಲು ಭಯಪಡುತ್ತಾರೆ. ಆದರೆ, ಒಂದೇ ಬಾರಿಗೆ 5 ಕೆಜಿ ಚಿನ್ನ ಧರಿಸುವುದು ಸಾಮಾನ್ಯ ಸಂಗತಿಯಲ್ಲ ಎನ್ನುತ್ತಾರೆ ಭಕ್ತರು. ಚಿನ್ನದ ದರದ ಬಗ್ಗೆ ನಿಮಗೆಲ್ಲ ವಿಶೇಷವಾಗಿ ಹೇಳಬೇಕಿಲ್ಲ ಒಂದು ಗ್ರಾಂ ಚಿನ್ನ ಖರೀದಿಸಲು ಚಿಂತಿಸಬೇಕಾದ ಪರಿಸ್ಥಿತಿ ಇದೆ. ಇದೀಗ ವಿಜಯ್ ಕುಮಾರ್ ಒಂದೇ ಬಾರಿಗೆ 5 ಕೆಜಿ ಚಿನ್ನಾಭರಣ ಧರಿಸಿರುವುದು ಅಚ್ಚರಿ ಮೂಡಿಸಿದೆ ಎನ್ನುತ್ತಾರೆ ಭಕ್ತರು

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು