ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ; ಇನ್ಮುಂದೆ ಭೌತಿಕ ಕಾರ್ಡ್ ಬೇಕಿಲ್ಲ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಆಧಾರ್ ಆ್ಯಪ್ ಬಿಡುಗಡೆ ಮಾಡಿದೆ. ಇಲ್ಲಿ ಬಳಕೆದಾರರು ತಮ್ಮ ಆಧಾರ್ ಮಾಹಿತಿಯನ್ನು ಯಾವುದೇ ಭೌತಿಕ ಗುರುತಿನ ಚೀಟಿಯ ಅಗತ್ಯವಿಲ್ಲದೆ, ಡಿಜಿಟಲ್ ರೂಪದಲ್ಲಿ ಪರಿಶೀಲಿಸಲು ಅವಕಾಶವಿದೆ.
ಈ ಹೊಸ ಅಪ್ಲಿಕೇಶನ್ ಕುರಿತು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಪೂರ್ಣ ವೀಡಿಯೋ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಫೇಸ್ ಐಡಿ ದೃಢೀಕರಣ, ಲಾಗಿನ್ ಮಾಡಲು ಕ್ಯೂ ಆರ್ ಕೋಡ್ ಸ್ಕ್ಯಾನ್ ಮತ್ತು ಬಳಕೆದಾರರ ಐಡಿ ಹಂಚಿಕೊಳ್ಳುವಂತಹ ವೈಶಿಷ್ಟ್ಯಗಳನ್ನು ನೋಡಬಹುದು.
ಸದ್ಯ ಆ್ಯಪ್ ಬೀಟಾ ಹಂತದಲ್ಲಿದೆ. ಈ ಆ್ಯಪ್ ಆಧಾರ್ ಪರಿಶೀಲನೆಯನ್ನು ಸರಳಗೊಳಿಸಲಿದೆ. ದುರುಪಯೋಗ ತಡೆಯುತ್ತದೆ. ಮತ್ತು ಬಳಕೆದಾರರ ಗೌಪ್ಯತೆಯನ್ನು ಕಾಪಾಡುತ್ತದೆ. ಮತ್ತೊಂದು ವಿಶೇಷವೆಂದರೆ, ಅಪ್ಲಿಕೇಶನ್ ಬಳಕೆದಾರಸ್ನೇಹಿಯಾಗಿದ್ದು, ಫೇಸ್ ಗುರುತಿನಂತಹ ವೈಶಿಷ್ಟ್ಯ ಹೊಂದಿದೆ. ಇದರಿಂದ ಯಾವುದೇ ಭೌತಿಕ ಪ್ರತಿಯ ಅಗತ್ಯವಿಲ್ಲದೆ ಬಳಕೆದಾರರು ತಮ್ಮ ಆಧಾರ್ ವಿವರಗಳನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಇದರಿಂದ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಒಯ್ಯುವುದು ತಪ್ಪುತ್ತದೆ.


ಹೊಸ ಆ್ಯಪ್ ನ ವೈಶಿಷ್ಟ್ಯಗಳು
• ಬಳಕೆದಾರರು ತಮ್ಮ ಒಪ್ಪಿಗೆಯೊಂದಿಗೆ ಅಗತ್ಯ ಡೇಟಾವನ್ನು ಸುರಕ್ಷಿತವಾಗಿ ಹಂಚಿಕೊಳ್ಳಬಹುದು. ಇದು ವೈಯಕ್ತಿಕ ಮಾಹಿತಿಯ ಗೌಪ್ಯತೆಯನ್ನು ಖಚಿತಪಡಿಸುತ್ತದೆ.
• ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಧಾರ್ ಪರಿಶೀಲನೆ ಮಾಡಬಹುದು.
• ಮುದ್ರಿತ ಆಧಾರ್ ಪ್ರತಿಗಳನ್ನು ಎಲ್ಲೆಡೆ ಕೊಂಡೊಯ್ಯುವ ಅವಶ್ಯಕತೆ ಇರುವುದಿಲ್ಲ.
• ಭದ್ರತೆ ಖಚಿತತೆಗೆ ಫೇಸ್ ಐಡಿ ದೃಢೀಕರಣ
• ಬಳಕೆದಾರರು ತಮ್ಮ ಭೌತಿಕ ಆಧಾರ್ ಪ್ರತಿಗಳನ್ನು ಸಲ್ಲಿಸುವ ಅಗತ್ಯವಿಲ್ಲದೆ ಡಿಜಿಟಲ್ ಮೂಲಕ ಪರಿಶೀಲಿಸಬಹುದು.
• ಫೇಸ್ ಐಡಿ ದೃಢೀಕರಣವು ಶೇ 100ರಷ್ಟು ಡಿಜಿಟಲ್ ಸುರಕ್ಷತೆಯನ್ನು ಖಚಿತಪಡಿಸುತ್ತದೆ.
• ಡೇಟಾ ಸೋರಿಕೆ ಮತ್ತು ದುರುಪಯೋಗ ಆಗದಂತೆ, ನಕಲಾಗದಂತೆ ತಡೆಯುತ್ತದೆ.
• ತ್ವರಿತ ಮತ್ತು ಸುಲಭವಾದ ಪರಿಶೀಲನಾ ಪ್ರಕ್ರಿಯೆಯನ್ನು ಸಕ್ರಿಯಗೊಳಿಸುತ್ತದೆ.
ಸದ್ಯ ಆಯ್ದ ಗುಂಪುಗಳ ಬಳಕೆದಾರರಿಗೆ ಆ್ಯಪ್ ಲಭ್ಯವಾಗುವಂತೆ ಮಾಡಲಾಗಿದೆ. ಇದರಲ್ಲಿ ಆಧಾರ್ ಸಂವಾದ್ ಕಾರ್ಯಕ್ರಮದ ಎಲ್ಲಾ ನೋಂದಾಯಿತರು ಸೇರಿದ್ದಾರೆ. ಯುಐಡಿಎಐ ಪ್ರಕಾರ, ಬೀಟಾ ಆವೃತ್ತಿಯು ಅಪ್ಲಿಕೇಶನ್ನ ಅಂತಿಮ ಬಿಡುಗಡೆಯ ಫೀಡ್ಬ್ಯಾಕ್ ಸಂಗ್ರಹಿಸಿ, ಅದನ್ನು ಮತ್ತಷ್ಟು ಉತ್ತಮಗೊಳಿಸಲಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!