ಕೇವಲ 180 ಮೀಟರ್‌ ಹತ್ತಿರದಲ್ಲಿರುವ ಮನೆಗೆ ಟ್ಯಾಕ್ಸಿ ಬುಕ್ ಮಾಡಿದ ಯುವತಿ; ಕಾರಣ ಕೇಳಿದರೆ ಶಾಕ್ ಆಗ್ತೀರಾ!!!

ಮನುಷ್ಯರು ಎಲ್ಲದರಲ್ಲೂ ಸುಲಭವಾದುದ್ದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಈಕೆ ಈ ನಿರ್ಧಾರವನ್ನು ಏಕೆ ತೆಗೆದುಕೊಂಡಳು ಎಂಬ ಕಾರಣವನ್ನು ಕೇಳಿದರೆ ನೀವು ಖಂಡಿತವಾಗಿಯೂ ಶಾಕ್ ಆಗ್ತಿರಾ.ಹೋಗುವ ಸ್ಥಳಕ್ಕೆ 5 ರಿಂದ 10 ನಿಮಿಷದಲ್ಲಿ ತಲುಪುತ್ತೇವೆ ಎಂದಾದ್ರೆ ಜನ ಟ್ಯಾಕ್ಸಿ ದುಡ್ಡು ಉಳಿಸುವ ಸಲುವಾಗಿ ಕಾಲ್ನಡಿಗೆಯಲ್ಲೇ ಆ ಸ್ಥಳಕ್ಕೆ ಹೋಗ್ತಾರೆ. ಆದ್ರೆ ಇಲ್ಲೊಂದು ಅದಕ್ಕೆ ತದ್ವಿರುದ್ಧವಾದ ಘಟನೆ ನಡೆದಿದ್ದು, 180 ಮೀಟರ್ ಕ್ರಮಿಸಲು ಅಂದ್ರೆ ಕೇವಲ 2 ನಿಮಿಷದ ದಾರಿಗೆ ಯುವತಿಯೊಬ್ಬಳು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದಾಳೆ. ಬೀದಿ ನಾಯಿಗಳ ಹಾವಳಿಗೆ ಹೆದರಿ ಆಕೆ ಮನೆಗೆ ತಲುಪಲು ಕೇವಲ 2 ನಿಮಿಷದ ದಾರಿಯಿದ್ದರೂ ಟ್ಯಾಕ್ಸಿ ಬುಕ್ ಮಾಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ಈ ಘಟನೆ ದೆಹಲಿಯಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಗೆ ಹೆದರಿ ಯುವತಿಯೊಬ್ಬಳು ರೈಡ್-ಹೀಲಿಂಗ್ ಆಪ್ಲಿಕೇಶನ್ ಮೂಲಕ ಬರೀ 180 ಮೀ. ಕ್ರಮಿಸಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದಾಳೆ. ಕೇವಲ 2 ನಿಮಿಷದ ದಾರಿಗೆ ಟ್ಯಾಕ್ಸಿ ಬುಕ್ ಮಾಡಿದ್ದನ್ನು ಕಂಡು ರೈಡರ್ ಶಾಕ್ ಆಗಿದ್ದು, ಇದು ಸರಿಯಾದ ವಿಳಾಸ ತಾನೇ ಎಂದು ಕೇಳಿದ್ದಾನೆ. ಬೀದಿನಾಯಿಗಳ ಹಾವಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ತಾನು ಎರಡು ನಿಮಿಷದ ದಾರಿಗೆ ಟ್ಯಾಕ್ಸಿ ಬುಕ್ ಮಾಡಿದ್ದು ಎಂದು ಆ ಯುವತಿ ಹೇಳಿಕೊಂಡಿದ್ದು, ಆಕೆಯ ಕಾರಣ ಕೇಳಿ ರೈಡರ್ ನಸು ನಕ್ಕಿದ್ದಾನೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬೈಕ್ ಟ್ಯಾಕ್ಸಿ ರೈಡರ್ ಕೇವಲ 180 ಮೀ. ದೂರ ಕ್ರಮಿಸಲು ಟ್ಯಾಕ್ಸಿ ಬುಕ್ ಮಾಡಿದ್ದಾ, ಲೊಕೇಷನ್ ಸರಿಯಾಗಿದೆ ತಾನೇ ಎಂದು ಹೇಳುತ್ತಿರುವ ದೃಶ್ಯವನ್ನು ಕಾಣಬಹುದು. ಆಗ ಆ ಯುವತಿ ಬೀದಿ ನಾಯಿಗಳೆಂದರೆ ನನಗೆ ತುಂಬಾ ಭಯ, ಅದಕ್ಕಾಗಿ ನಾನು 2 ನಿಮಿಷಗಳ ದಾರಿಗೂ ಟ್ಯಾಕ್ಸಿ ಬುಕ್ ಮಾಡಿದ್ದು ಎಂದು ಹೇಳಿಕೊಂಡಿದ್ದಾಳೆ. ಈ ಕಾರಣ ಕೇಳಿ ಟ್ಯಾಕ್ಸಿ ರೈಡರ್ ನಸು ನಕ್ಕಿದ್ದು, ನಂತರ ಸೇಫ್ ಆಗಿ ಆಕೆಯನ್ನು ಮನೆಗೆ ಬಿಟ್ಟು ಬಂದಿದ್ದಾನೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!