ಕೇವಲ 180 ಮೀಟರ್‌ ಹತ್ತಿರದಲ್ಲಿರುವ ಮನೆಗೆ ಟ್ಯಾಕ್ಸಿ ಬುಕ್ ಮಾಡಿದ ಯುವತಿ; ಕಾರಣ ಕೇಳಿದರೆ ಶಾಕ್ ಆಗ್ತೀರಾ!!!

ಮನುಷ್ಯರು ಎಲ್ಲದರಲ್ಲೂ ಸುಲಭವಾದುದ್ದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಈಕೆ ಈ ನಿರ್ಧಾರವನ್ನು ಏಕೆ ತೆಗೆದುಕೊಂಡಳು ಎಂಬ ಕಾರಣವನ್ನು ಕೇಳಿದರೆ ನೀವು ಖಂಡಿತವಾಗಿಯೂ ಶಾಕ್ ಆಗ್ತಿರಾ.ಹೋಗುವ ಸ್ಥಳಕ್ಕೆ 5 ರಿಂದ 10 ನಿಮಿಷದಲ್ಲಿ ತಲುಪುತ್ತೇವೆ ಎಂದಾದ್ರೆ ಜನ ಟ್ಯಾಕ್ಸಿ ದುಡ್ಡು ಉಳಿಸುವ ಸಲುವಾಗಿ ಕಾಲ್ನಡಿಗೆಯಲ್ಲೇ ಆ ಸ್ಥಳಕ್ಕೆ ಹೋಗ್ತಾರೆ. ಆದ್ರೆ ಇಲ್ಲೊಂದು ಅದಕ್ಕೆ ತದ್ವಿರುದ್ಧವಾದ ಘಟನೆ ನಡೆದಿದ್ದು, 180 ಮೀಟರ್ ಕ್ರಮಿಸಲು ಅಂದ್ರೆ ಕೇವಲ 2 ನಿಮಿಷದ ದಾರಿಗೆ ಯುವತಿಯೊಬ್ಬಳು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದಾಳೆ. ಬೀದಿ ನಾಯಿಗಳ ಹಾವಳಿಗೆ ಹೆದರಿ ಆಕೆ ಮನೆಗೆ ತಲುಪಲು ಕೇವಲ 2 ನಿಮಿಷದ ದಾರಿಯಿದ್ದರೂ ಟ್ಯಾಕ್ಸಿ ಬುಕ್ ಮಾಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ಈ ಘಟನೆ ದೆಹಲಿಯಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಗೆ ಹೆದರಿ ಯುವತಿಯೊಬ್ಬಳು ರೈಡ್-ಹೀಲಿಂಗ್ ಆಪ್ಲಿಕೇಶನ್ ಮೂಲಕ ಬರೀ 180 ಮೀ. ಕ್ರಮಿಸಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದಾಳೆ. ಕೇವಲ 2 ನಿಮಿಷದ ದಾರಿಗೆ ಟ್ಯಾಕ್ಸಿ ಬುಕ್ ಮಾಡಿದ್ದನ್ನು ಕಂಡು ರೈಡರ್ ಶಾಕ್ ಆಗಿದ್ದು, ಇದು ಸರಿಯಾದ ವಿಳಾಸ ತಾನೇ ಎಂದು ಕೇಳಿದ್ದಾನೆ. ಬೀದಿನಾಯಿಗಳ ಹಾವಳಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ತಾನು ಎರಡು ನಿಮಿಷದ ದಾರಿಗೆ ಟ್ಯಾಕ್ಸಿ ಬುಕ್ ಮಾಡಿದ್ದು ಎಂದು ಆ ಯುವತಿ ಹೇಳಿಕೊಂಡಿದ್ದು, ಆಕೆಯ ಕಾರಣ ಕೇಳಿ ರೈಡರ್ ನಸು ನಕ್ಕಿದ್ದಾನೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬೈಕ್ ಟ್ಯಾಕ್ಸಿ ರೈಡರ್ ಕೇವಲ 180 ಮೀ. ದೂರ ಕ್ರಮಿಸಲು ಟ್ಯಾಕ್ಸಿ ಬುಕ್ ಮಾಡಿದ್ದಾ, ಲೊಕೇಷನ್ ಸರಿಯಾಗಿದೆ ತಾನೇ ಎಂದು ಹೇಳುತ್ತಿರುವ ದೃಶ್ಯವನ್ನು ಕಾಣಬಹುದು. ಆಗ ಆ ಯುವತಿ ಬೀದಿ ನಾಯಿಗಳೆಂದರೆ ನನಗೆ ತುಂಬಾ ಭಯ, ಅದಕ್ಕಾಗಿ ನಾನು 2 ನಿಮಿಷಗಳ ದಾರಿಗೂ ಟ್ಯಾಕ್ಸಿ ಬುಕ್ ಮಾಡಿದ್ದು ಎಂದು ಹೇಳಿಕೊಂಡಿದ್ದಾಳೆ. ಈ ಕಾರಣ ಕೇಳಿ ಟ್ಯಾಕ್ಸಿ ರೈಡರ್ ನಸು ನಕ್ಕಿದ್ದು, ನಂತರ ಸೇಫ್ ಆಗಿ ಆಕೆಯನ್ನು ಮನೆಗೆ ಬಿಟ್ಟು ಬಂದಿದ್ದಾನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!