ಕೋಳಿಗಳಲ್ಲಿ ಹಕ್ಕಿ ಜ್ವರ ಭೀತಿ ; ಕಟ್ಟೆಚ್ಚರಕ್ಕೆ ಸರ್ಕಾರ ಆದೇಶ.

ಸತ್ತ ಕೋಳಿಗಳ ಸ್ಯಾಂಪಲ್ ಭೂಪಾಲ್ ಸಂಶೋಧನಾಲಯಕ್ಕೆ ರವಾನೆ, ಹಕ್ಕಿಜ್ವರ

ಬೆಂಗಳೂರು :- ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಆದೇಶ ಮಾಡಿದೆ.
ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ತುಮಕೂರಿನ ಕೆಲವು ಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಈ ಸಾಂಕ್ರಾಮಿಕ ರೋಗ ಕಂಡು ಬಂದಿದೆ. ಸಾಮೂಹಿಕವಾಗಿ ಕೋಳಿಗಳು ಸಾಯುತ್ತಿ ರುವ ಹಿನ್ನೆಲೆಯಲ್ಲಿ ರೋಗ ಪತ್ತೆಗೆ ಭೂಪಾಲ್ನ ಸಂಶೋಧನಾ ಕೇಂದ್ರಕ್ಕೆ ಮೃತ ಕೋಳಿಗಳ ಸ್ಯಾಂಪಲ್ ಕಳುಹಿಸಲಾಗಿದೆ. ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಳ್ಳು ತ್ತಿದ್ದಂತೆ ಕುಕ್ಕುಟ ಉದ್ಯಮ ನೆಲೆ ಕಚ್ಚಿದೆ. ಮುಂದಿನ ದಿನಗಳಲ್ಲಿ ಕೋಳಿ ಸಾಕಾಣಿಕೆದಾರರಿಗೆ ನಷ್ಟ ಉಂಟಾ ಗುವ ಸಾಧ್ಯತೆಗಳು ಕಂಡುಬರುತ್ತಿವೆ. ರೋಗ ಕಂಡು ಬಂದ ಕಡೆಗಳ ಪ್ರದೇಶದ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪಶುಸಂಗೋಪನಾ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಎಲ್ಲಾ ಕೋಳಿಗಳನ್ನು ಸಾಯಿಸುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಮೃತ ಕೋಳಿಗಳಲ್ಲಿ
ಎಚ್5ಎನ್ ಏವಿಯನ್ ಇನ್ನೂಯೆನ್ನಾ ರೋಗಾಣು ಇರುವುದು ಪತ್ತೆಯಾಗಿದೆ. ಇದು ವ್ಯಾಪಕವಾಗಿ ಹರಡು ವುದನ್ನು ತಡೆಗಟ್ಟಲು ಎರಡೂ ಇಲಾಖೆಗಳು ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದಲ್ಲದೆ, ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.


ಈ ರೋಗ ಪಕ್ಷಿಗಳಿಂದ ಕೋಳಿಗೆ ಹರಡಿರಬಹುದು ಎಂಬ ಸಂಶಯವಿದೆ, ಆದರೆ, ಇದುವರೆಗೂ ಈ ರೋಗ ಮನುಷ್ಯರಿಗೆ ತಗುಲಿರುವ ವರದಿ ಇಲ್ಲ. ಮೊದಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಎರಡು-ಮೂರು ದಿನಗಳಲ್ಲೇ ರಾಜ್ಯದ ಇತರೆ ಭಾಗಗಳಿಗೆ ಹರಡಿರುವುದರಿಮದ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲೇ ಕಟ್ಟೆಚ್ಚರ ವಹಿಸುವ ಜೊತೆಗೆ ವಿವಿಧ ಭಾಗಗಳ ಕೋಳಿಗಳ ರೋಗ ಪರೀಕ್ಷೆಗೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೋಳಿ ಗಳಿಗೆ ಹಕ್ಕಿ ಜ್ವರ ತಗಲುವುದು ಸಾಮಾನ್ಯ, ರೋಗಕ್ಕೆ ತುತ್ತಾದ ಕೋಳಿ ಮಾಂಸ ಸೇವನೆ ಮಾಡಿದರೆ ಮನುಷ್ಯ ನಿಗೂ ಸಾಂಕ್ರಾಮಿಕ ರೋಗ ತಗಲುವ ಸಾಧ್ಯತೆ ಇದೆ.
ಹಾಸಿಗೆ ಮೀಸಲಿಡಲು ಸೂಚನೆ: ಕೋಳಿ ಮಾಂಸ
ತಿನ್ನುವ ಮೊದಲು ಹೆಚ್ಚಿನ ಉಷ್ಣತೆಯಲ್ಲಿ ಬೇಯಿಸಿ ಬಳಸಿದರೆ ದುಷ್ಪರಿಣಾಮ ಉಂಟಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಕ್ಕಿ ಜ್ವರ ಕಾಣಿಸಿ ಕೊಂಡಿರುವ ಪ್ರದೇಶಕ್ಕೆ ಹತ್ತಿರದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಇಲಾಖೆ ಸೂಚಿಸಿದೆ. ಅಲ್ಲದೆ, ರೋಗ ಕಾಣಿಸಿಕೊಂಡ ವ್ಯಕ್ತಿಗಳಿಗೆ ಅಗತ್ಯ ಔಷಧ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆಯೂ ತಿಳಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!