ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾರೆ.
ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೇ ಕರ್ನಾಟಕದ ಬಾಗಲಕೋಟೆಯವನು.
ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್ಜಾನ್ ಮಲಿಕ್ ಬಾಬ್ ಫೀರಜಾದೆ, ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಬಲು ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದ ವರೆಗೆ ಏರಿದ ಅವರು ಒಂದರ ಮೇಲೊಂದು ಪ್ರಶ್ನೆಗಳಿಗೆ ಉತ್ತರ ನೀಡುತ್ತಾ, 50 ಲಕ್ಷ ರೂಪಾಯಿ ಗೆದ್ದು ಬಂದಿದ್ದಾರೆ.
ಯುವಕ ರಮ್ಜಾನ್ ಮಲ್ಲಿಕ್ ಅವರ ತಂದೆ ಮಹಾಲಿಂಗಪುರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ರಮ್ಜಾನ್ ಸಹ ತಂದೆಗೆ ಸಹಾಯ ಮಾಡುತ್ತಿದ್ದರು. ಬಡ ಕುಟುಂಬವಾದ್ದರಿಂದ ಕುಟುಂಬಕ್ಕೆ ಸಹಾಯ ಮಾಡಲು ಚಹಾ ಅಂಗಡಿಯಲ್ಲಿ ಲೊಟ ತೊಳೆಯುವ ಕೆಲಸ. ಬ್ಯಾಡ್ಮಿಂಟನ್ ಕೋರ್ಟ್ನ ವಾಚ್ಮ್ಯಾನ್ ಹೀಗೆ ಹಲವು ರೀತಿಯ ಚಿಕ್ಕ ಪುಟ್ಟ ಕೆಲಸ ಮಾಡುತ್ತಾ ಬಿಎ ಮುಗಿಸಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಹೀಗಿರುವಾಗ ಕೌನ್ ಬನೇಗಾ ಕರೋಡ್ಪತಿಗೆ ಅರ್ಜಿ ಹಾಕಿದ್ದ ರಮ್ಜಾನ್ಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರಕಿದೆ.
ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡಿರುವ ರಮ್ಜಾನ್, ರಿಯಾಲಿಟಿ ಶೋನಲ್ಲಿ ಅದ್ಭುತವಾಗಿ ಆಡಿ, ಅಮಿತಾಬ್ ಬಚ್ಚನ್ ಕೇಳಿದ ಬಹುತೇಕ ಎಲ್ಲ ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಅಸಲಿಗೆ ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ್ದರೆ ಒಂದು ಕೋಟಿ ರೂಪಾಯಿ ಹಣ ಸಿಕ್ಕಿರುತ್ತಿತ್ತು. ಆದರೆ ಆ ಪ್ರಶ್ನೆಯ ಉತ್ತರದ ಮೇಲೆ ಅನುಮಾನ ಇದ್ದ ಕಾರಣ ರಮ್ಜಾನ್ ಅವರು ಆಟದಿಂದ ನಿವೃತ್ತಿ ಹೊಂದಿ 50 ಲಕ್ಷ ರೂಪಾಯಿ ಹಣವನ್ನು ಗೆದ್ದು ಬೀಗಿದ್ದಾರೆ.
ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಗೆದ್ದು ಬಂದ ರಮ್ಜಾನ್ ಅವರನ್ನು ಊರ ಜನ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಹಾರ ತುರಾಯಿ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ರಮ್ಜಾನ್, ಕೌನ್ ಬನೇಗಾ ಕರೋಡ್ಪತಿಯಲ್ಲಿ ಗೆದ್ದು ‘ಸ್ಲಂ ಡಾಗ್ ಮಿಲೇನಿಯರ್’ ಕತೆಯನ್ನು ನಿಜ ಮಾಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು