ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾರೆ.
ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೇ ಕರ್ನಾಟಕದ ಬಾಗಲಕೋಟೆಯವನು.
ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್ಜಾನ್ ಮಲಿಕ್ ಬಾಬ್ ಫೀರಜಾದೆ, ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಬಲು ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದ ವರೆಗೆ ಏರಿದ ಅವರು ಒಂದರ ಮೇಲೊಂದು ಪ್ರಶ್ನೆಗಳಿಗೆ ಉತ್ತರ ನೀಡುತ್ತಾ, 50 ಲಕ್ಷ ರೂಪಾಯಿ ಗೆದ್ದು ಬಂದಿದ್ದಾರೆ.
ಯುವಕ ರಮ್ಜಾನ್ ಮಲ್ಲಿಕ್ ಅವರ ತಂದೆ ಮಹಾಲಿಂಗಪುರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ರಮ್ಜಾನ್ ಸಹ ತಂದೆಗೆ ಸಹಾಯ ಮಾಡುತ್ತಿದ್ದರು. ಬಡ ಕುಟುಂಬವಾದ್ದರಿಂದ ಕುಟುಂಬಕ್ಕೆ ಸಹಾಯ ಮಾಡಲು ಚಹಾ ಅಂಗಡಿಯಲ್ಲಿ ಲೊಟ ತೊಳೆಯುವ ಕೆಲಸ. ಬ್ಯಾಡ್ಮಿಂಟನ್ ಕೋರ್ಟ್ನ ವಾಚ್ಮ್ಯಾನ್ ಹೀಗೆ ಹಲವು ರೀತಿಯ ಚಿಕ್ಕ ಪುಟ್ಟ ಕೆಲಸ ಮಾಡುತ್ತಾ ಬಿಎ ಮುಗಿಸಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಹೀಗಿರುವಾಗ ಕೌನ್ ಬನೇಗಾ ಕರೋಡ್ಪತಿಗೆ ಅರ್ಜಿ ಹಾಕಿದ್ದ ರಮ್ಜಾನ್ಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರಕಿದೆ.
ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡಿರುವ ರಮ್ಜಾನ್, ರಿಯಾಲಿಟಿ ಶೋನಲ್ಲಿ ಅದ್ಭುತವಾಗಿ ಆಡಿ, ಅಮಿತಾಬ್ ಬಚ್ಚನ್ ಕೇಳಿದ ಬಹುತೇಕ ಎಲ್ಲ ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಅಸಲಿಗೆ ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ್ದರೆ ಒಂದು ಕೋಟಿ ರೂಪಾಯಿ ಹಣ ಸಿಕ್ಕಿರುತ್ತಿತ್ತು. ಆದರೆ ಆ ಪ್ರಶ್ನೆಯ ಉತ್ತರದ ಮೇಲೆ ಅನುಮಾನ ಇದ್ದ ಕಾರಣ ರಮ್ಜಾನ್ ಅವರು ಆಟದಿಂದ ನಿವೃತ್ತಿ ಹೊಂದಿ 50 ಲಕ್ಷ ರೂಪಾಯಿ ಹಣವನ್ನು ಗೆದ್ದು ಬೀಗಿದ್ದಾರೆ.
ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಗೆದ್ದು ಬಂದ ರಮ್ಜಾನ್ ಅವರನ್ನು ಊರ ಜನ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಹಾರ ತುರಾಯಿ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ರಮ್ಜಾನ್, ಕೌನ್ ಬನೇಗಾ ಕರೋಡ್ಪತಿಯಲ್ಲಿ ಗೆದ್ದು ‘ಸ್ಲಂ ಡಾಗ್ ಮಿಲೇನಿಯರ್’ ಕತೆಯನ್ನು ನಿಜ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!