ಕ್ಯಾಮೆರಾದಲ್ಲಿ ಸೆರೆಯಾದ ಶ್ವೇತ ವರ್ಣದ ಜಿಂಕೆ ; ಸ್ವರ್ಗದಿಂದ ಧರೆಗಿಳಿದು ಬಂದ ಜೀವಿದಂತಿದೆ ಅಲ್ವಾ!

ಭೂಮಿಯ ಮೇಲೆ ವೈವಿದ್ಯಮಯ ಜೀವಿಗಳು ವಾಸಿಸುತ್ತವೆ. ಅವುಗಳಲ್ಲಿ ಕೆಲವೊಂದು ಅತ್ಯಪರೂಪದ ಜೀವಿಗಳು ಅಪರೂಪಕ್ಕೆ ಕಾಣಿಸಿಕೊಳ್ಳುವ ಮೂಲಕ ನಮ್ಮನ್ನು ಬೆರಗುಗೊಳಿಸುತ್ತವೆ. ಹೀಗೆ ಚಿತ್ರವಿಚಿತ್ರವಾದ ಹಾಗೂ ಮುದ್ದುಮುದ್ದಾಗಿರುವ ಜೀವಿಗಳು ಕಾಣಿಸಿಕೊಳ್ಳುವ ಘಟನೆಗಳ ಸುದ್ದಿಗಳು ವಿರಳವಾಗಿ ಕೇಳಿ ಬರುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಜೀವಿಗಳು ತಮ್ಮ ನೋಟ ಹಾಗೂ ಸೌಂದರ್ಯದಿಂದಲೇ ನಮ್ಮನ್ನು ಬೆರಗುಗೊಳಿಸುತ್ತವೆ. ಅದೇ ರೀತಿ ಇಲ್ಲೊಂದು ಸಖತ್ ಕ್ಯೂಟ್ ಆಗಿರುವ ಶ್ವೇತ ವರ್ಣದ ಜಿಂಕೆಯೊಂದು ಕಾಣಿಸಿಕೊಂಡಿದೆ. ಹೌದು ಹಿಮ ಭರಿತ ಕಾಡಿನಲ್ಲಿ ಬಿಳಿ ಬಣ್ಣದ ಅತಿ ಅಪರೂಪದ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ತಮ್ಮ ಕ್ಯಾಮೆರಾದಲ್ಲಿ ಈ ಸುಂದರ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದ್ದು, ಜಿಂಕೆಯ ಸೌಂದರ್ಯಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಹಿಮಾವೃತ ಪ್ರದೇಶದಲ್ಲಿ ಅತ್ಯಪರೂಪದ ಬಿಳಿ ಬಣ್ಣದ ಆಲ್ಬಿನೋ ಜಿಂಕೆ ಕಾಣಿಸಿಕೊಂಡಿದೆ. ಕಾಡಿನ ಸಮೀಪದಲ್ಲುರುವ ರಸ್ತೆಯಲ್ಲಿ ಹೋಗುತ್ತಿರುವ ವೇಳೆ ಮಹಿಳೆಯೊಬ್ಬರ ಕಣ್ಣಿಗೆ ಸುಂದರವಾದ ಆಲ್ಬಿನೋ ಜಿಂಕೆ ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಆಕೆ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಈ ಹಿಂದೆ ಕಬಿನಿಯಲ್ಲಿಯೂ ಬಿಳಿ ಬಣ್ಣದ ಜಿಂಕೆಯೊಂದು ಕಾಣಿಸಿಕೊಂಡಿತ್ತು. ಅಲ್ಬಿನೋ ಜಿಂಕೆಗಳು ಅತ್ಯಂತ ಅಪರೂಪದ ಮೃಗಗಳಾಗಿವೆ. ಪ್ರತಿ ಒಂದು ಲಕ್ಷ ಜಿಂಕೆಗಳ ಜನನದಲ್ಲಿ ಒಂದು ಮಾತ್ರ ಈ ಬಿಳಿ ಬಣ್ಣದ ಜಿಂಕೆ ಜನಿಸುತ್ತವೆ. ರಕ್ತದಲ್ಲಿನ ಮೆಲನಿನ್ ಎಂಬ ಅಂಶದ ಕೊರತೆಯಿಂದಾಗಿ ಕೆಲವೊಂದು ಜಿಂಕೆಗಳು ಹೀಗೆ ಬಿಳಿ ಬಣ್ಣವನ್ನು ಹೊಂದಿರುತ್ತವೆ. ಹೀಗಿದ್ದರೂ ಇವುಗಳು ನೋಡಲು ಬಹಳ ಸುಂದರವಾಗಿರುತ್ತವೆ. ಇದೀಗ ಮತ್ತೊಮ್ಮೆ ಶ್ವೇತ ವರ್ಣದ ಜಿಂಕೆ ಕಾಣಿಸಿಕೊಂಡಿದೆ.

AccuWeather ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿರುವ ಈ ವಿಡಿಯೋದಲ್ಲಿ ಹಿಮದ ರಾಶಿಯ ಮಧ್ಯೆ ಗುಲಾಬಿ ಬಣ್ಣದ ಕಂಗಳ ಹಾಗೂ ಶ್ವೇತ ವರ್ಣದಿಂದ ಕೂಡಿದ ಆಲ್ಬಿನೋ ಜಿಂಕೆ ನಿಂತಿರುವ ಸುಂದರ ದೃಶ್ಯವನ್ನು ಕಾಣಬಹುದು. ಮಹಿಳೆಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅವರ ಕಣ್ಣಿಗೆ ಈ ಅದ್ಭುತ ಪ್ರಾಣಿ ಕಾಣಿಸಿಕೊಂಡಿದೆ.

2028 ಚುನಾವಣೆಗೂ ಹುಣಸೂರಿನ ಜನತೆ ಆಶೀರ್ವಾದ ಮಾಡ್ತರೆ… ಮುಂದಿನ ದಿನಗಳಲ್ಲಿ ಹರೀಶ್‌ ಗೌಡ್ರು ಸಚಿವರಾಗ್ತಾರೆ!

ಫೆಬ್ರವರಿ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.4 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಾನು ನೋಡಿದ ಅತ್ಯಂತ ಸುಂದರ ಪ್ರಾಣಿಗಳಲ್ಲಿ ಇದು ಒಂದುʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼ ವಾವ್ಹ್.. ಇದಂತೂ ತುಂಬಾ ಸುಂದರವಾದ ಪ್ರಾಣಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಪರಿಪೂರ್ಣ ಸೌಂದರ್ಯಕ್ಕೆ ಉದಾಹರಣೆಯಂತಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!