ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ‘ಪಾತಾಳ್ ಲೋಕ್ 2’ ವೆಬ್ ಸಿರೀಸ್ ಟೀಸರ್ ಬಿಡುಗಡೆ…

ಹಿಂದಿ ವೆಬ್ ಸಿರೀಸ್ಗಳ ಪೈಕಿ ‘ಪಾತಾಳ್ ಲೋಕ್’ ಸೃಷ್ಟಿಸಿದ ಕ್ರೇಜ್ ದೊಡ್ಡದು. ಈಗ ಇದರ ಎರಡನೇ ಸೀಸನ್ ಬರುತ್ತಿದೆ. ‘ಪಾತಾಳ್ ಲೋಕ್ 2’ ಟೀಸರ್ ಬಿಡುಗಡೆ ಆಗಿದೆ. ಈ ಟೀಸರ್ ಮೂಲಕ ಹೈಪ್ ಜಾಸ್ತಿ ಆಗಿದೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ಬಿಡುಗಡೆ ಆಗಲಿರುವ ಈ ವೆಬ್ ಸರಣಿಯಲ್ಲಿ ಡಾರ್ಕ್ ಕಹಾನಿ ಇರಲಿದೆ.

2020ರಲ್ಲಿ ‘ಪಾತಾಳ್ ಲೋಕ್’ ವೆಬ್ ಸರಣಿ ಬಿಡುಗಡೆ ಆಗಿತ್ತು. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ಆ ವೆಬ್ ಸಿರೀಸ್ ನೋಡಿ ವೀಕ್ಷಕರು ಫಿದಾ ಆಗಿದ್ದರು. ಅನುಷ್ಕಾ ಶರ್ಮಾ ನಿರ್ಮಾಣ ಮಾಡಿದ್ದ ‘ಪಾತಾಳ್ ಲೋಕ್’ ವೆಬ್ ಸಿರೀಸ್ನಲ್ಲಿ ಜೈದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ಮಾಡಿದ್ದರು. ‘ಪಾತಾಳ್ ಲೋಕ್’ ಸೂಪರ್ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಬರಲಿದೆ ಎಂದು ಕೂಡ ಹೇಳಲಾಗಿತ್ತು. ಅದಕ್ಕಾಗಿ ವೀಕ್ಷಕರು ಕಾದಿದ್ದರು. ಈಗ ಗುಡ್ ನ್ಯೂಸ್ ಸಿಕ್ಕಿದೆ. ‘ಪಾತಾಳ್ ಲೋಕ್ 2’ ವೆಬ್ ಸರಣಿಯ ಟೀಸರ್ ಬಿಡುಗಡೆ ಆಗಿದೆ.
ಇಂದು (ಜನವರಿ 3) ‘ಪಾತಾಳ್ ಲೋಕ್ 2’ ಟೀಸರ್ ರಿಲೀಸ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ. ಮೊದಲ ಸೀಸನ್ ಭಾರಿ ಸಕ್ಸಸ್ ಕಂಡಿದ್ದರಿಂದ 2ನೇ ಸೀಸನ್ ಮೇಲೆ ಈ ಪರಿ ಕ್ರೇಜ್ ಸೃಷ್ಟಿ ಆಗಿದೆ. ಈ ಬಾರಿ ಕೂಡ ನಟ ಜೈದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್ನಲ್ಲಿ ಅವರು ಹೊಸ ಕಥೆಯ ಕಿರುಪರಿಚಯ ಮಾಡಿಕೊಟ್ಟಿದ್ದಾರೆ.
‘ಒಂದು ಹಳ್ಳಿಯಲ್ಲಿ ಒಬ್ಬ ವ್ಯಕ್ತಿ ಇದ್ದ. ಅವನಿಗೆ ಕೀಟಗಳನ್ನು ಕಂಡರೆ ಆಗುತ್ತಿರಲಿಲ್ಲ. ಒಂದು ದಿನ ಆತ ಒಂದು ಕೀಟವನ್ನು ಸಾಯಿಸಿದ. ರಾತ್ರೋರಾತ್ರಿ ಅವನು ಹೀರೋ ಆಗಿಬಿಟ್ಟ. ಮರುದಿನ ಆತನಿಗೆ ಊರಿನವರೆಲ್ಲ ಸನ್ಮಾನ ಮಾಡಿದರು. ಮುಂದಿನ ಹಲವು ರಾತ್ರಿಗಳು ಅವನು ಬಹಳ ನೆಮ್ಮದಿಯಿಂದ ನಗುನಗುತ್ತಾ ನಿದ್ರೆ ಮಾಡಿದ. ಆದರೆ ಒಂದು ರಾತ್ರಿ ಅವನ ಮಂಚದ ಕೆಳಗೆ ಏನೂ ಹರಿದಾಡಿದಂತೆ ಕಾಣಿಸಿತು. ಮೊದಲು ಒಂದು ಕೀಟ ಇತ್ತು. ಆಮೇಲೆ 10 ಆಯಿತು. ಬಳಿಕ ಸಾವಿರ, ಲಕ್ಷ, ಕೋಟಿ ಆಯಿತು. ಪಾಪ ಅವನು ಒಂದು ಕೀಟವನ್ನು ಸಾಯಿಸಿ ಸಮಸ್ಯೆ ಮುಗಿಯಿತು ಎಂದುಕೊಂಡಿದ್ದ. ಆದರೆ ಪಾತಾಳ್ ಲೋಕದಲ್ಲಿ ಆ ರೀತಿ ಆಗುವುದಿಲ್ಲ’ ಎಂದು ‘ಪಾತಾಳ್ ಲೋಕ್ 2’ ಕಥೆಯ ಬಗ್ಗೆ ಟೀಸರ್ನಲ್ಲಿ ಇಂಟ್ರಡಕ್ಷನ್ ನೀಡಲಾಗಿದೆ.
ಜನವರಿ 17ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ‘ಪತಾಳ್ ಲೋಕ್ 2’ ವೆಬ್ ಸಿರೀಸ್ ಪ್ರಸಾರ ಆರಂಭ ಆಗಲಿದೆ. ಜೈದೀಪ್ ಅಹಲಾವತ್ ಅವರ ಪ್ರಭುದ್ಧ ನಟನೆಯನ್ನು ನೋಡಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಟೀಸರ್ ನೋಡಿ ಎಲ್ಲರೂ ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ. ಗುಲ್ ಪನಾಕ್, ತಿಲೋತ್ತಮಾ ಶೋಮೆ ಮುಂತಾದವರು ಕೂಡ ಈ ವೆಬ್ ಸರಣಿಯಲ್ಲಿ ನಟಿಸಿದ್ದಾರೆ. ಟೀಸರ್ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!