ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ‘ಪಾತಾಳ್ ಲೋಕ್ 2’ ವೆಬ್ ಸಿರೀಸ್ ಟೀಸರ್ ಬಿಡುಗಡೆ…

ಹಿಂದಿ ವೆಬ್ ಸಿರೀಸ್ಗಳ ಪೈಕಿ ‘ಪಾತಾಳ್ ಲೋಕ್’ ಸೃಷ್ಟಿಸಿದ ಕ್ರೇಜ್ ದೊಡ್ಡದು. ಈಗ ಇದರ ಎರಡನೇ ಸೀಸನ್ ಬರುತ್ತಿದೆ. ‘ಪಾತಾಳ್ ಲೋಕ್ 2’ ಟೀಸರ್ ಬಿಡುಗಡೆ ಆಗಿದೆ. ಈ ಟೀಸರ್ ಮೂಲಕ ಹೈಪ್ ಜಾಸ್ತಿ ಆಗಿದೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ಬಿಡುಗಡೆ ಆಗಲಿರುವ ಈ ವೆಬ್ ಸರಣಿಯಲ್ಲಿ ಡಾರ್ಕ್ ಕಹಾನಿ ಇರಲಿದೆ.

2020ರಲ್ಲಿ ‘ಪಾತಾಳ್ ಲೋಕ್’ ವೆಬ್ ಸರಣಿ ಬಿಡುಗಡೆ ಆಗಿತ್ತು. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ಆ ವೆಬ್ ಸಿರೀಸ್ ನೋಡಿ ವೀಕ್ಷಕರು ಫಿದಾ ಆಗಿದ್ದರು. ಅನುಷ್ಕಾ ಶರ್ಮಾ ನಿರ್ಮಾಣ ಮಾಡಿದ್ದ ‘ಪಾತಾಳ್ ಲೋಕ್’ ವೆಬ್ ಸಿರೀಸ್ನಲ್ಲಿ ಜೈದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ಮಾಡಿದ್ದರು. ‘ಪಾತಾಳ್ ಲೋಕ್’ ಸೂಪರ್ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಬರಲಿದೆ ಎಂದು ಕೂಡ ಹೇಳಲಾಗಿತ್ತು. ಅದಕ್ಕಾಗಿ ವೀಕ್ಷಕರು ಕಾದಿದ್ದರು. ಈಗ ಗುಡ್ ನ್ಯೂಸ್ ಸಿಕ್ಕಿದೆ. ‘ಪಾತಾಳ್ ಲೋಕ್ 2’ ವೆಬ್ ಸರಣಿಯ ಟೀಸರ್ ಬಿಡುಗಡೆ ಆಗಿದೆ.
ಇಂದು (ಜನವರಿ 3) ‘ಪಾತಾಳ್ ಲೋಕ್ 2’ ಟೀಸರ್ ರಿಲೀಸ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ. ಮೊದಲ ಸೀಸನ್ ಭಾರಿ ಸಕ್ಸಸ್ ಕಂಡಿದ್ದರಿಂದ 2ನೇ ಸೀಸನ್ ಮೇಲೆ ಈ ಪರಿ ಕ್ರೇಜ್ ಸೃಷ್ಟಿ ಆಗಿದೆ. ಈ ಬಾರಿ ಕೂಡ ನಟ ಜೈದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್ನಲ್ಲಿ ಅವರು ಹೊಸ ಕಥೆಯ ಕಿರುಪರಿಚಯ ಮಾಡಿಕೊಟ್ಟಿದ್ದಾರೆ.
‘ಒಂದು ಹಳ್ಳಿಯಲ್ಲಿ ಒಬ್ಬ ವ್ಯಕ್ತಿ ಇದ್ದ. ಅವನಿಗೆ ಕೀಟಗಳನ್ನು ಕಂಡರೆ ಆಗುತ್ತಿರಲಿಲ್ಲ. ಒಂದು ದಿನ ಆತ ಒಂದು ಕೀಟವನ್ನು ಸಾಯಿಸಿದ. ರಾತ್ರೋರಾತ್ರಿ ಅವನು ಹೀರೋ ಆಗಿಬಿಟ್ಟ. ಮರುದಿನ ಆತನಿಗೆ ಊರಿನವರೆಲ್ಲ ಸನ್ಮಾನ ಮಾಡಿದರು. ಮುಂದಿನ ಹಲವು ರಾತ್ರಿಗಳು ಅವನು ಬಹಳ ನೆಮ್ಮದಿಯಿಂದ ನಗುನಗುತ್ತಾ ನಿದ್ರೆ ಮಾಡಿದ. ಆದರೆ ಒಂದು ರಾತ್ರಿ ಅವನ ಮಂಚದ ಕೆಳಗೆ ಏನೂ ಹರಿದಾಡಿದಂತೆ ಕಾಣಿಸಿತು. ಮೊದಲು ಒಂದು ಕೀಟ ಇತ್ತು. ಆಮೇಲೆ 10 ಆಯಿತು. ಬಳಿಕ ಸಾವಿರ, ಲಕ್ಷ, ಕೋಟಿ ಆಯಿತು. ಪಾಪ ಅವನು ಒಂದು ಕೀಟವನ್ನು ಸಾಯಿಸಿ ಸಮಸ್ಯೆ ಮುಗಿಯಿತು ಎಂದುಕೊಂಡಿದ್ದ. ಆದರೆ ಪಾತಾಳ್ ಲೋಕದಲ್ಲಿ ಆ ರೀತಿ ಆಗುವುದಿಲ್ಲ’ ಎಂದು ‘ಪಾತಾಳ್ ಲೋಕ್ 2’ ಕಥೆಯ ಬಗ್ಗೆ ಟೀಸರ್ನಲ್ಲಿ ಇಂಟ್ರಡಕ್ಷನ್ ನೀಡಲಾಗಿದೆ.
ಜನವರಿ 17ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ‘ಪತಾಳ್ ಲೋಕ್ 2’ ವೆಬ್ ಸಿರೀಸ್ ಪ್ರಸಾರ ಆರಂಭ ಆಗಲಿದೆ. ಜೈದೀಪ್ ಅಹಲಾವತ್ ಅವರ ಪ್ರಭುದ್ಧ ನಟನೆಯನ್ನು ನೋಡಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ. ಟೀಸರ್ ನೋಡಿ ಎಲ್ಲರೂ ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ. ಗುಲ್ ಪನಾಕ್, ತಿಲೋತ್ತಮಾ ಶೋಮೆ ಮುಂತಾದವರು ಕೂಡ ಈ ವೆಬ್ ಸರಣಿಯಲ್ಲಿ ನಟಿಸಿದ್ದಾರೆ. ಟೀಸರ್ನಲ್ಲಿ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು