
ಈ ಘಟನೆಯು ಧಾರ್ಮಿಕ ತಾರತಮ್ಯದ ಆರೋಪಗಳನ್ನು ಹುಟ್ಟುಹಾಕಿದೆ. ಏಕೆಂದರೆ ಗಡ್ಡವು ಅನೇಕ ಮುಸ್ಲಿಂ ಪುರುಷರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದೀಗ ಕಾಶ್ಮೀರದ ವಿದ್ಯಾರ್ಥಿ ಸಂಘವು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಸಲ್ಲಿಸಿದ್ದು, ಕಾಲೇಜಿನ ಕ್ರಮಗಳು ಭಾರತೀಯ ಸಂವಿಧಾನದ 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ವಿದ್ಯಾರ್ಥಿ ಸಂಘವು, ಶಿಕ್ಷಣ ಸಂಸ್ಥೆಗಳು ಮೂಲಭೂತ ಹಕ್ಕುಗಳೊಂದಿಗೆ ಸಂಘರ್ಷಿಸುವ ಡ್ರೆಸ್ ಕೋಡ್ಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. “ಈ ನಿರಾಕರಣೆ ಧಾರ್ಮಿಕ ಪೂರ್ವಾಗ್ರಹದಿಂದ ಉಂಟಾಗಿದ್ದು, ಅದು ಅಪಾಯಕಾರಿಯಾಗಿದೆ” ಎಂದು ಒಕ್ಕೂಟದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.




