ಗಡ್ಡವಿದೆ ಎಂದು ಕಾಶ್ಮೀರಿ ವೈದ್ಯನಿಗೆ ಮೆಡಿಕಲ್ ಕಾಲೇಜಿನಲ್ಲಿ ದಾಖಲಾತಿ ನಿರಾಕರಣೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ……..

ನೆಫ್ರಾಲಜಿ ಸ್ಪೆಷಲೈಸೇಷನ್ಗೆ ಸ್ಪರ್ಧಾತ್ಮಕವಾದ NEET-SS ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಮ್ಮು ಮತ್ತು ಕಾಶ್ಮೀರದ ವೈದ್ಯ ಜುಬೈರ್ ಅಹ್ಮದ್ ತಮಿಳುನಾಡಿನ ಕೊಯಮತ್ತೂರಿನ ಕೊವಾಯ್ ಮೆಡಿಕಲ್ ಸೆಂಟರ್ ಆ್ಯಂಡ್ ಹಾಸ್ಪಿಟಲ್ ನಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಅನಿರೀಕ್ಷಿತ ಆಘಾತ ಎದುರಾಯಿತು. ತಮ್ಮ ಮೆಡಿಕಲ್ ಕಾಲೇಜಿನ ಡ್ರೆಸ್ ಕೋಡ್ ಉಲ್ಲಂಘನೆಯನ್ನು ಉಲ್ಲೇಖಿಸಿ ಕಾಲೇಜು ಅಧಿಕಾರಿಗಳು ಆ ವೈದ್ಯ ಗಡ್ಡ ಬೋಳಿಸಿಕೊಳ್ಳದ ಹೊರತು ಅವರನ್ನು ಕಾಲೇಜಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಹ್ಮದ್ ಅವರು ಗಡ್ಡ ಬೋಳಿಸುವೆನೆಂದು ಭರವಸೆಯನ್ನು ನೀಡಿದರೂ ತಮಿಳುನಾಡಿನ ಆಸ್ಪತ್ರೆ ಆಡಳಿತ ಸೀಟು ನೀಡಲು ನಿರಾಕರಿಸಿತು. ಅವರ 2 ಲಕ್ಷ ರೂ. ಅಡ್ಮಿಷನ್ ಡೆಪಾಸಿಟ್ ಅನ್ನು ಸಹ ತಡೆಹಿಡಿಯಿತು.

ಈ ಘಟನೆಯು ಧಾರ್ಮಿಕ ತಾರತಮ್ಯದ ಆರೋಪಗಳನ್ನು ಹುಟ್ಟುಹಾಕಿದೆ. ಏಕೆಂದರೆ ಗಡ್ಡವು ಅನೇಕ ಮುಸ್ಲಿಂ ಪುರುಷರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದೀಗ ಕಾಶ್ಮೀರದ ವಿದ್ಯಾರ್ಥಿ ಸಂಘವು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಸಲ್ಲಿಸಿದ್ದು, ಕಾಲೇಜಿನ ಕ್ರಮಗಳು ಭಾರತೀಯ ಸಂವಿಧಾನದ 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ವಿದ್ಯಾರ್ಥಿ ಸಂಘವು, ಶಿಕ್ಷಣ ಸಂಸ್ಥೆಗಳು ಮೂಲಭೂತ ಹಕ್ಕುಗಳೊಂದಿಗೆ ಸಂಘರ್ಷಿಸುವ ಡ್ರೆಸ್ ಕೋಡ್ಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. “ಈ ನಿರಾಕರಣೆ ಧಾರ್ಮಿಕ ಪೂರ್ವಾಗ್ರಹದಿಂದ ಉಂಟಾಗಿದ್ದು, ಅದು ಅಪಾಯಕಾರಿಯಾಗಿದೆ” ಎಂದು ಒಕ್ಕೂಟದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!