ಗರ್ಭಿಣಿ ಪತ್ನಿ ಸಾ*ನಿಂದ ಮನನೊಂದು ಪತಿ ವಿಷ ಸೇವಿಸಿ ಆತ್ಮಹ*ಗೆ ಯತ್ನ.

ಹುಬ್ಬಳ್ಳಿ :- ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದ ರಾಧಿಕಾ ಪತಿ. ಸದ್ಯ ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಷ್ಟಕ್ಕೂ ರಾಧಿಕಾ ವಯಸ್ಸು ಕೇವಲ 19 ವರ್ಷ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದವರು. ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಮೊನ್ನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು. ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಬಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಎಸ್ಎಫ್ ಕಮ್ಮಾರ ಪ್ರತಿಕ್ರಿಯಿಸಿದ್ದು, ಬೆಳಗಾವಿಯಿಂದ ಕಿಮ್ಸ್ ಆಸ್ಪತ್ರೆ ಬಂದಾಗ ಗರ್ಭಿಣಿ ರಾಧಿಕಾ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಿಪಿ, ನಾಡಿಮಿಡಿತ ಇರಲಿಲ್ಲ, ರಾಧಿಕಾ ಅವರಿಗೆ ಪ್ರಜ್ಞೆಯೇ ಇರಲಿಲ್ಲ. ಹೊಟ್ಟೆಯಲ್ಲಿ ಮಗುಯಿತ್ತು. ಗರ್ಭಪಾತ ಆಗಿರಲಿಲ್ಲ. ಆದರೆ ನಮ್ಮ ವೈದ್ಯರು ಸಕಾಲದಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.
ಸತ್ತ ಮಗು ರಾಧಿಕಾ ಹೊಟ್ಟೆಯಲ್ಲೇ ಇತ್ತು. ಅವರಿಗೆ ಪ್ರಜ್ಞೆ ಬಂದಾಗ ಗರ್ಭದಿಂದ ಮಗು ಹೊರ ತೆಗೆಯುವ ಆಲೋಚನೆ ಇತ್ತು. ಆದರೆ ಅವರ ಆರೋಗ್ಯ ಚೇತರಿಕೆ ಆಗಲೇ ಇಲ್ಲ. ಇಂದು ಬೆಳಗ್ಗೆ 11 ಗಂಟೆ ರಾಧಿಕಾ ಸಾವನ್ನಪ್ಪಿದ್ದಾರೆ. ಇದರಿಂದ ಮನನೊಂದು ಆಕೆ ಪತಿ ಮಲ್ಲೇಶಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!