ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿಗಳು….

ಕನ್ನಡದ ಕಿರುತೆರೆ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡ ಸಿಂಗರ್ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ಧನಂಜಯ್ ಶರ್ಮ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಅಖಿಲಾ ನಿರ್ಧರಿಸಿದ್ದಾರೆ. ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮ ಅರ್ಜಿ ಸಲ್ಲಿಸಿದ್ದಾರೆ.ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ಖಾಸಗಿ ಬದುಕಿನ ಬಗ್ಗೆ ಶಾಕಿಂಗ್ ಸುದ್ದಿ ಇದು. ‘ಕನ್ನಡ ಕೋಗಿಲೆ’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 3 ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು. ಆದರೆ ಅವರ ಸಂಸಾರದಲ್ಲಿ ಸಾಮರಸ್ಯ ಮಾಯವಾಗಿದೆ. ಧನಂಜಯ್ ಶರ್ಮಾ ಮತ್ತು ಅಖಿಲಾ ಪಜಿಮಣ್ಣು ಅವರು ಬೇರಾಗಲು ನಿರ್ಧರಿಸಿದ್ದಾರೆ.

ಅಖಿಲಾ ಅವರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಅವರು ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರು ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಅವರು ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಧನಂಜಯ್ ಶರ್ಮ ಅವರು ಪುತ್ತೂರಿನ ನ್ಯಾಯಾಲಯಕ್ಕೆ ಆಗಮಿಸಿ ಹೇಳಿಕೆ ನೀಡಿ ವಾಪಸ್ ತೆರಳಿದ್ದಾರೆ. ಸದ್ಯದಲ್ಲೇ ಅವರು ಅಮೆರಿಕಕ್ಕೆ ಹೋಗಲಿದ್ದಾರೆ. ಸದ್ಯ ನ್ಯಾಯಾಲಯದಲ್ಲಿ ಈ ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ಮುಗಿದಿದೆ. ನ್ಯಾಯಾಲಯವು ಶುಕ್ರವಾರಕ್ಕೆ (ಜೂನ್ 19) ತೀರ್ಪು ಕಾಯ್ದಿರಿಸಿದೆ. ಅರೇಂಜ್ ಮ್ಯಾರೇಜ್ ಮಾಡಿಕೊಂಡಿದ್ದ ಅಖಿಲಾ ಮತ್ತು ಧನಂಜಯ್ ಅವರು ಈಗ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು