ಗೃಹಬಂಧನದಲ್ಲಿಟ್ಟು ಪತ್ನಿಯನ್ನು ಚಿತ್ರಹಿಂಸೆ ನೀಡಿದ ವೈದ್ಯ ಪತಿ

ಚಿಕ್ಕಮಗಳೂರು :- ಚಿಕ್ಕಮಂಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿ ಡಾ, ರವಿಕುಮಾರ್ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಮಹಿಳೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಒಂದು ಅವಮಾನಿಯ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆ ಚಿಕ್ಕಮಗಳೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪೊಲೀಸರಿಗೆ ಈ ಸುದ್ದಿ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ರವಿಕುಮಾರ್ ನಾಪತ್ತೆಯಾಗಿದ್ದಾನೆ. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದ. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆಯಾಗಿದ್ದಾರೆ. ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ.
ವಿನುತಾ ರಾಣಿ ಮೂಲತಃ ಶಿವಮೊಗ್ಗದ ವಿನೋಬಾನಗರದವರು, ಆದರೆ ವಿಚ್ಛೇದನ ನೀಡಿ ಕೂಡಾ ಆಕೆಯನ್ನು ಮನೆಯಲ್ಲಿ ಕೂಡಿ ಹಾಕಿದ್ದಾನೆ ಎಂದು ವಿನುತಾ ರಾಣಿ ಅವರ ಮನೆಯವರು ಆರೋಪಿಸಿದ್ದಾರೆ. ಡಾ.ರವಿಕುಮಾರ್ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆಕೆಯ ಗಂಡ ಊಟದಲ್ಲಿ ಮತ್ತಿನ ಔಷಧ ನೀಡುತ್ತಿದ್ದ, ಜತೆಗೆ ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆಯ ಕುಟುಂಬದವರು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ಬಂಧಿಸುವಂತೆ ಒತ್ತಾಯಿಸಿದ್ದಾರೆ. ವಿನುತಾ ರಾಣಿ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಕುಟುಂಬ ಹಾಗೂ ಮಹಿಳೆಯ ಹೇಳಿಕೆ ಆಧಾರದ ಮೇಲೆ ದೂರು ದಾಖಲಿಸಿಕೊಂಡು ನಾಪತ್ತೆಯಾಗಿರುವ ಡಾ.ರವಿಕುಮಾರ್ನ ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!