ಚೆಸ್ನಲ್ಲಿ ಭಾರತ ಕ್ಕೆ ಮತ್ತೊಂದು ಮೈಲಿಗಲ್ಲು ; 37 ವರ್ಷದ ಕೊನೇರು ಹಂಪಿ ವಿಶ್ವ ಚಾಂಪಿಯನ್.

ನ್ಯೂಯಾರ್ಕ್: ಭಾರತದ ಗ್ರ್ಯಾಂಡ್ಮಾಸ್ಟರ್ ಕೊನೇರು ಹಂಪಿ ಅವರು ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸಿ ಮಹಿಳಾ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 37 ವರ್ಷದ ಕೊನೇರು ಹಂಪಿ ಅವರು ಚೀನಾದ ಜು ವೆನ್ಜುನ್ ಬಳಿಕ ಮಹಿಳೆಯರ ವಿಭಾಗದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ಎರಡನೇ ಚೆಸ್ ಆಟಗಾರ್ತಿಯಾಗಿದ್ದಾರೆ.
ಭಾನುವಾರ ನ್ಯೂಯಾರ್ಕ್ನಲ್ಲಿ ನಡೆದ ಪಂದ್ಯಾವಳಿಯ ಫೈನಲ್ನಲ್ಲಿ 11 ಅಂಕಗಳಲ್ಲಿ 8.5 ಅಂಕಗಳನ್ನು ಕಲೆ ಹಾಕುವ ಮೂಲಕ ಅಗ್ರಸ್ಥಾನ ಗಳಿಸಿದರು. 2019ರಲ್ಲಿ ಜಾರ್ಜಿಯಾದಲ್ಲಿ ನಡೆದ ಟೂರ್ನಿಯಲ್ಲೂ ಕೊನೇರು ಅವರು ಪ್ರಶಸ್ತಿ ಗೆದ್ದಿದ್ದರು. ಅದರ ನಂತರ ಇದು ಅವರ ಎರಡನೇ ಗೆಲುವಾಗಿದೆ.

ಭಾರತದ ಮಟ್ಟಕ್ಕೆ ಕೊನೇರು ಹಂಪಿ ಅವರ ಈ ಗೆಲುವು ಚೆಸ್ನಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದೆ. ಡಿಂಗ್ ಲಿರೆನ್ ಅವರನ್ನು ಸೋಲಿಸಿ, ಭಾರತದ ಡಿ.ಗುಕೇಶ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ ಎರಡು ವಾರದಲ್ಲಿ ಕೊನೇರು ಹಂಪಿ ಅವರು ಚಾಂಪಿಯನ್ ಪಟ್ಟ ಅಲಂಕರಿಸಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಡಿ.ಗುಕೇಶ್ ಅವರು, ವಿಶ್ವನಾಥನ್ ಆನಂದ್ ಬಳಿಕ ಟೂರ್ನಮೆಂಟ್ ಗೆದ್ದ ಎರಡನೇ ಭಾರತೀಯರಾಗಿದ್ದಾರೆ. ಜೊತೆಗೆ ವಿಶ್ವ ಚೆಸ್ ಚಾಂಪಿಯನ್ ಕಿರೀಟ ಗೆದ್ದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಈ ಸಾಧನೆಗಳ ಹೊರತಾಗಿ, ಕೊನೇರು ಹಂಪಿ ಅವರು 2022ರ ಮಹಿಳಾ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಮತ್ತು 2024ರಲ್ಲಿ ಮಹಿಳಾ ಅಭ್ಯರ್ಥಿಗಳ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು