ಜಗದೀಶ್ & ರಂಜಿತ್ Biggboss ಯಿಂದ ಔಟ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ. ಈ ಫೈಟ್​ನಿಂದ ದೊಡ್ಮನೆ ಪ್ರಕ್ಷುಬ್ದವಾಗಿದೆ ಎಂದು ಹೇಳಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

‘ಬಿಗ್ ಬಾಸ್​’ನಲ್ಲಿ ವಾತಾವರಣ ಹದಗೆಟ್ಟಿದೆ. ಅಕ್ಟೋಬರ್ 17ರ ಎಪಿಸೋಡ್​ನಲ್ಲಿ ಎಲ್ಲರೂ ಜಗದೀಶ್ ವಿರುದ್ಧ ಒಂದಾಗಿದ್ದರು. ಇದರಿಂದ ಸಿಡುಕುತ್ತಿದ್ದ ಜಗದೀಶ್ ಬಿಗ್ ಬಾಸ್ ವಿರುದ್ಧವೇ ಅವಾಚ್ಯ ಶಬ್ದ ಬಳಕೆ ಮಾಡುತ್ತಿದ್ದರು. ಇನ್ನು, ರಂಜಿತ್ ಅವರು ‘ಹೀಗೆ ಮುಂದುವರಿದರೆ ಜಗದೀಶ್ ಅವರ ಎದಮೇಲೆ ಕಾಲಿಟ್ಟು ಹೋಗೋದು’ ಎಂದು ಎಚ್ಚರಿಕೆ ನೀಡಿದ್ದರು. ಈಗ ಹಾಗೆಯೇ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

 

ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು ನೇರವಾಗಿ ಹೊರಹಾಕಲಾಗುತ್ತದೆ. ಈ ಮೊದಲು ಹುಚ್ಚ ವೆಂಕಟ್ ಅವರು ಈ ರೀತಿ ಫೈಟ್ ಮಾಡಿಕೊಂಡು ಹೊರ ಹೋಗಿದ್ದರು. ಈಗ ಜಗದೀಶ್ ಹಾಗೂ ರಂಜಿತ್ ಬಡಿದಾಡಿಕೊಂಡು ಹೊರ ಹೋದರು ಎನ್ನಲಾಗಿದೆ. ಕೆಲವು ವರದಿಗಳಲ್ಲಿ ಜಗದೀಶ್ ಮಾತ್ರ ಹೊರ ಹೋಗಿದ್ದಾರೆ ಎನ್ನಲಾಗಿದೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!