ಜನವರಿ 26 ರಿಂದ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ (Suttur) ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 26 ರಿಂದ 31 ರ ವರೆಗೂ ಅದ್ಧೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಮಠಾಧೀಶರು ಸಹ ಭಾಗವಹಿಸಿದ್ದರು.
ಈ ಸುತ್ತೂರು ಜಾತ್ರಾ ಮಹೋತ್ಸವವು ಬಹಳ ಜನಪ್ರಿಯ ಕಾರ್ಯಕ್ರಮವಾಗಿದ್ದು ನಾಡಿನಾದ್ಯಂತದಿಂದ ಭಕ್ತಾದಿಗಳು ಜಾತ್ರೆಯಲ್ಲಿ ಭಾಗವಹಿಸಲು ಬರುತ್ತಾರೆ.
ಈ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಆ ಪ್ರದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ತೋರಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತದೆ. ಕೃಷಿ ಹಾಗೂ ವಿವಿಧ ರೀತಿಯ ವಸ್ತುಪ್ರದರ್ಶನ, ವಿಚಾರ ಕಾರ್ಯಾಗಾರಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.


ಜಾತ್ರೆಯಲ್ಲಿ ಗ್ರಾಮೀಣ ಆಟಗಳನ್ನು ಆಡುವುದು ಸುತ್ತೂರಿನಲ್ಲಿ ದಶಕಗಳಿಂದ ಒಂದು ಶ್ರೀಮಂತ ಸಂಪ್ರದಾಯದಂತೆ ಆಚರಿಸಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಆಟಗಳನ್ನು ಮುಂದಿನ ಪೀಳಿಗೆಗೆ ಧಾಟಿಸುವುದು ಮತ್ತು ನಗರವಾಸಿ ಜನರಿಗೆ ಈ ಆಟಗಳನ್ನು ಪರಿಚಯಿಸುವುದು ಈ ಸಂಪ್ರದಾಯದ ಉದ್ದೇಶ.
ಇದೇ ಕಾರಣಕ್ಕೆ ರಾಜ್ಯದಲ್ಲೇ ಪ್ರಸಿದ್ಧ ಜಾತ್ರೆ ಎಂದು ಕೊಂಡಾಡಲ್ಪಡುವ ಸುತ್ತೂರು ಜಾತ್ರೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಅಲ್ಲದೆ, ರಾಜ್ಯದ ಪ್ರಮುಖ ಜಾತ್ರೆಗಳಲ್ಲೊಂದಾಗಿ ಸ್ಥಾನ ಪಡೆದುಕೊಂಡಿದೆ ಎಂದರೂ ತಪ್ಪಾಗಲಾರದು. ಜಾತ್ರಾ ಮಹೋತ್ಸವದಲ್ಲಿ ನಿತ್ಯವೂ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಜಾತ್ರೆಯ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ.

ಸಾಮೂಹಿಕ ವಿವಾಹ : ಜನವರಿ 27 ಸೋಮವಾರದಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಂತರ್ಜಾತಿಗಳ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳ್ಳಲಿದ್ದಾರೆ. ವಿವಾಹಗಳ ನೋಂದಣಿಯಾಗುತ್ತದೆ. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ಗಳನ್ನು ನೀಡಲಾಗುತ್ತದೆ. ಸಾಮೂಹಿಕ ವಿವಾಹ ವ್ಯವಸ್ಥೆಯಲ್ಲಿ ಈವರೆಗೆ 3200ಕ್ಕೂ ಹೆಚ್ಚು ಮಂದಿ ಸತಿಪತಿಗಳಾಗಿದ್ದಾರೆ. ವಧು-ವರರು ವಿವಾಹದ ದೃಢೀಕರಣಪತ್ರ ಹಾಗೂ ನೋಂದಣಿಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಪಡೆದುಕೊಳ್ಳಬಹುದಾಗಿದೆ.

54ನೇ ದನಗಳ ಪರಿಷೆ : ದನಗಳ ಜಾತ್ರೆಯನ್ನು ಕಳೆದ 53 ವರ್ಷಗಳಿಂದಲೂ ಏರ್ಪಡಿಸಲಾಗುತ್ತಿದೆ. ರೈತಬಾಂಧವರು ಎತ್ತು, ಹಸು, ಹೋರಿಗಳನ್ನು ಕೊಂಡುಕೊಳ್ಳಲು ಹಾಗೂ ಮಾರಾಟ ಮಾಡಲು ಅವಕಾಶವಿರುತ್ತದೆ. ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮಾಡಲಾಗುವುದು. ಚುಚ್ಚುಮದ್ದು ಮತ್ತು ಜಂತುಹುಳು ನಿವಾರಕ ಔಷಧಿಯನ್ನು ಉಚಿತವಾಗಿ ನೀಡಲಾಗುತ್ತದೆ. ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!