ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್