ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!