ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!