ಟಿ20 ಪವರ್ಪ್ಲೇ ನಿಯಮದಲ್ಲಿ ಬದಲಾವಣೆ ತಂದ ಐಸಿಸಿ….

ಐಸಿಸಿ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಪವರ್ಪ್ಲೇ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಮಳೆ ಅಥವಾ ಇತರ ಕಾರಣಗಳಿಂದ ಓವರ್ಗಳು ಕಡಿಮೆಯಾದರೆ ಪವರ್ಪ್ಲೇ, ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಉದಾಹರಣೆಗೆ, 5 ಓವರ್ಗಳ ಪಂದ್ಯದಲ್ಲಿ 1.3 ಓವರ್ಗಳು ಪವರ್ಪ್ಲೇ ಆಗಿರುತ್ತದೆ. ಈ ನಿಯಮ ಜುಲೈ 2 ರಿಂದ ಜಾರಿಗೆ ಬರುತ್ತದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಆ ಪ್ರಕಾರ, ಟೆಸ್ಟ್ ಕ್ರಿಕೆಟ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿ ಜಾರಿಗೆ ತಂದಿದ್ದ ಐಸಿಸಿ, ಇದೀಗ ಟಿ20 ಕ್ರಿಕೆಟ್ನ ನಿಯಮದಲ್ಲೂ ಒಂದು ಬದಲಾವಣೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್ ಸಾಕಷ್ಟು ಮನ್ನಣೆಗಳಿಸುತ್ತಿದೆ. ಪ್ರತಿ ದೇಶಗಳು ಸಹ ಟಿ20 ಲೀಗ್ಗಳನ್ನು ಆಯೋಜಿಸುವ ಮೂಲಕ ಜನರನ್ನು ಕ್ರಿಕೆಟ್ನತ್ತ ಸೆಳೆಯುತ್ತಿವೆ. ಇದನ್ನು ಅರಿತುಕೊಂಡಿರುವ ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳ ಪವರ್ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಐಸಿಸಿ ತಂದಿರುವ ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್ನ ಓವರ್ಗಳನ್ನು ಕಡಿಮೆ ಮಾಡಿದರೆ, ಪವರ್ಪ್ಲೇ ಓವರ್ಗಳನ್ನು ಓವರ್ಗಳ ಬದಲಿಗೆ ಚೆಂಡುಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, 20 ಓವರ್ಗಳ ಇನ್ನಿಂಗ್ಸ್ನಲ್ಲಿ ಮೊದಲ 6 ಓವರ್ಗಳು ಪವರ್ಪ್ಲೇ ಆಗಿದ್ದವು. ಈ 6 ಓವರ್ಗಳಲ್ಲಿ ಫೀಲ್ಡಿಂಗ್ ಮಾಡುತ್ತಿರುವ ತಂಡವು 30 ಯಾರ್ಡ್ ವೃತ್ತದ ಹೊರಗೆ ಇಬ್ಬರಿಗಿಂತ ಹೆಚ್ಚು ಫೀಲ್ಡರ್ಗಳನ್ನು ಇರಿಸುವಂತಿಲ್ಲ. ಆ ಬಳಿಕ ಅಂದರೆ 6 ಓವರ್ ಮುಗಿದ ನಂತರ ಉಳಿದ ಓವರ್ಗಳಲ್ಲಿ, 30 ಯಾರ್ಡ್ ವೃತ್ತದ ಹೊರಗೆ ಐದು ಫೀಲ್ಡರ್ಗಳನ್ನು ನಿಲ್ಲಿಸಬಹುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!