ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು….

ರೈತರ ಗೋಳು ಕೇಳುವವರು ಯಾರು ಎಂಬ ಪರಿಸ್ಥಿತಿಗೆ ತಲುಪಿದೆ ಕರ್ನಾಟಕದ ರೈತರ ಪರಿಸ್ಥಿತಿ. ಅದಕ್ಕೆ ನಿದರ್ಶನದಂತೆ ಕರ್ನಾಟಕದಲ್ಲಿ ಟಮೋಟ ದರವು ಏಕಾಏಕಿ ಕುಸಿತವಾಗಿದೆ. : ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ ಕೇವಲ 50 ರೂ.ಗೆ ಮಾರಾಟವಾಗುತ್ತಿದೆ. ಬೆಳೆಗೆ ಹೆಚ್ಚಿನ ವೆಚ್ಚವಾಗಿದ್ದರೂ, ಕಡಿಮೆ ದರದಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಬದನೆಕಾಯಿ ಮತ್ತು ನುಗ್ಗೆಕಾಯಿ ದರಗಳೂ ಕುಸಿದಿವೆ. ಸರ್ಕಾರದ ವಿರುದ್ಧ ರೈತರು ಕಿಡಿಕಾರಿದ್ದಾರೆ. ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ. ದರ ಕುಸಿತಕ್ಕೆ ಗದಗ ಎಪಿಎಂಸಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ದರಗಳು ಏರಿಕೆಯಾದರೂ ರೈತರು ಬೆಳೆದ ಬೆಳೆಗಳ ದರ ಏಕೆ ಏರಿಕೆಯಾಗುತ್ತಿಲ್ಲ ಅಂತ ಕಿಡಿಕಾರಿದ್ದಾರೆ. ಅಷ್ಟಕ್ಕೂ ಅನ್ನ ನೀಡುವ ಅನ್ನದಾತನಿಗೆ ಸರಿಯಾದ ಬೆಲೆ ಸಿಗಲಿಲ್ಲವಾದರೆ ದೇಶ ಅಭಿವೃದ್ಧಿಯಾಗುವುದು ಖಂಡಿತವಾಗಿಯೂ ಕಷ್ಟವಾಗಿದೆ.

ಮಾರುಕಟ್ಟೆಗೆ ಹೆಚ್ಚು ಫಸಲು ಬಂದಿದ್ದರಿಂದ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 25 ಕೆಜಿ ಟ್ರೇ ಕೇವಲ 50 ರೂ. ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ 20-30 ರೂ. ಕೆಜಿ ಟೊಮೆಟೊ ಮಾರಾಟವಾಗುತ್ತಿದ್ದರು, ರೈತರಿಗೆ ಕೆಜಿ ಕೇವಲ 2 ರೂ. ಸಿಗುತ್ತಿದೆ. ರೈತರಿಗಾಗುತ್ತಿರುವ ಈ ಅನ್ಯಾಯ ತಿಳಿದಿದ್ದರೂ ಎಪಿಎಂಸಿ ಅಧಿಕಾರಿಗಳು ಮೌನವಾಗಿದ್ದಾರೆ. ಬದನೆಕಾಯಿ, ನುಗ್ಗೆಕಾಯಿ ಬೆಲೆಯೂ ಕುಸಿತವಾಗಿದೆ. ಒಂದು ಟ್ರೇ ಬದನೆಕಾಯಿಗೆ 50 ರಿಂದ 80 ರೂ ಬೆಲೆ ಇದೆ. ನುಗ್ಗೆಕಾಯಿ ಒಂದು ಕೆಜಿಗೆ 10 ರೂ ಮಾರಾಟವಾಗುತ್ತಿದೆ. ಇನ್ನು ಒಂದು ಟ್ರೇ ಟೊಮೆಟೊ ಮಾರುಕಟ್ಟೆಯಲ್ಲಿ 50 ರೂ. ಮಾರಾಟವಾಗುತ್ತಿದೆ. ರೈತರು ಎಕರೆಗೆ 30-50 ಸಾವಿರ ರೂ ಮಾಡಿರುವ ಖರ್ಚು ಕೂಡ ವಾಪಸ್ ಬರಿತ್ತಿಲ್ಲ. ಸಾಮಾನ್ಯ ಮಾರುಕಟ್ಟೆಯಲ್ಲಿ ಸಿಗುವ ಬೆಲೆಯೂ ಕಷ್ಟಪಟ್ಟು ಬೆಳೆದ ರೈತನಿಗೆ ಸಿಗುತ್ತಿಲ್ಲ. ಬದಲಾಗಿ ಇದು ಮಧ್ಯವರ್ತಿಗಳಿಗೆ ಸೇರುತ್ತಿದೆ. ಕೃಷಿ ಅವರಂಬಿಕ ದೇಶವಾದ ಭಾರತದಲ್ಲಿ, ರೈತರಿಗೆ ಹೆಚ್ಚಿನ ಮನ್ನಣೆ ನೀಡುವಂತಾಗಲಿ ಎಂಬುದು ಎಲ್ಲರ ಮನವಿಯಾದರೂ ಸಹ, ಅಧಿಕಾರಿಗಳು ಇದರ ಬಗ್ಗೆ ಮೌನದಿಂದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದು ಟ್ರೇ ನಲ್ಲಿ ಸುಮಾರು 20-25 ಕೆಜಿ ಟೊಮೆಟೊ ಇರುತ್ತೆ. 2 ರೂ ಕೆಜಿಯಂತೆ ಟೊಮೆಟೊ ಮಾರಾಟವಾಗುತ್ತಿದ್ದು, ಸರ್ಕಾರ ಹಾಗೂ ಎಪಿಎಂಸಿ ವರ್ತಕರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಗೆ ಕ್ವಿಂಟಾಲ್ಗಟ್ಟಲೇ ಟೊಮೆಟೊ ತಂದರೂ ರೈತರ ಕೈ ಖಾಲಿ ಖಾಲಿ ಆಗಿದೆ.ಟೊಮೆಟೊ ಕಟಾವು ಮಾಡುವ ಕಾರ್ಮಿಕರಿಗೆ 300 ರೂ ದಿನ ಕೂಲಿ ಕೊಡಬೇಕು. ಮಾರುಕಟ್ಟೆಗೆ ಒಂದು ಟ್ರೇ ಹೇರಿಕೊಂಡು ಬಂದರೆ 30 ರೂ. ವಾಹನ ಬಾಡಿಗೆ ಇದೆ. ಜೊತೆಗೆ ದಲ್ಲಾಳಿಗೆ 10 ರೂ. ಕೊಡಬೇಕು. ಹಾಗಾಗಿ ಒಂದು ಟ್ರೇ ಗೆ ರೈತರಿಗೆ 10 ರೂ ಮಾತ್ರ ಸಿಗುತ್ತದೆ ಎಂದು ಕಿಡಿಕಾರಿದ್ದಾರೆ. ಆ 10 ರೂ ಟೀ, ತಿಂಡಿ ಮಾಡಿದರೆ ಖಾಲಿ ಕೈಯಲ್ಲಿ ಮನೆಗೆ ಹೋಗಬೇಕಾಗುತ್ತೆ ಎಂದು ಗೋಳಾಡಿದರು.

ಹಗಲು ರಾತ್ರಿ ಕಷ್ಟ ಪಟ್ಟು ಟೊಮೆಟೊ ಬೆಳೆದಿದ್ದೇವೆ. ಮಾರುಕಟ್ಟೆಗೆ ತಂದರೆ ಸೂಕ್ತ ದರ ಸಿಗುತ್ತಿಲ್ಲ ಹೀಗಾದರೆ ಕುಟುಂಬ ನಿರ್ವಹಣೆಗೆ ತುಂಬಾನೆ ತೊಂದರೆ ಆಗುತ್ತದೆ. ಸರ್ಕಾರ ಟೊಮೆಟೊ ಬೆಳೆದ ರೈತರ ನೆರವಿಗೆ ಬರಬೇಕು. ಸೂಕ್ತದ ದರ ನಿಗದಿ ಮಾಡಬೇಕೆಂದು ಒತ್ತಾಯಿಸಲಾಗಿದೆ. ಬೆಳೆದ ಬೆಳೆಗೆ ಸರಿಯಾದ ಫಲ ಸಿಗಲಿಲ್ಲವಾದರೆ ರೈತರು ಸಾಲದ ಮಡುವಿನಲ್ಲಿ ಬೀಳುತ್ತಾರೆ. ನಂತರ ತಮ್ಮ ಜೀವನದಲ್ಲಿ ಏರುಪೇರು ಆದಾಗ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಈ ರೀತಿ ಆಗಬಾರದೆಂದರೆ ಸರ್ಕಾರ ಹಾಗೂ ಎಪಿಎಂಸಿ ವರ್ತಕರು ಈ ವಿಷಯದ ಬಗ್ಗೆ ಕೂಡಲೇ ಗಮನಹರಿಸಬೇಕಾದದು ಪ್ರಮುಖವಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!