ಕರ್ನಾಟಕ ಸರ್ಕಾರವು ಟ್ಯಾಟೂ ಹಾಕಿಸಿಕೊಳ್ಳುವ ಮತ್ತು ಹಾಕುವವರಮೇಲೆ ಹೊಸ ಕಾನೂನು ಜಾರಿಗೆ ತರಲು ಯೋಜಿಸಿದೆ. ಇದು ಅನೈರ್ಮಲ್ಯದಿಂದ ಉಂಟಾಗುವ ಸೋಂಕು ತಡೆಯುವ ಉದ್ದೇಶ ಹೊಂದಿದೆ. ಈ ಕಾನೂನು ಟ್ಯಾಟೂ ಆರ್ಟಿಸ್ಟ್ಗಳಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊಂದಿರುತ್ತದೆ. ಚರ್ಮದ ಕ್ಯಾನ್ಸರ್ ಮತ್ತು ಹೆಚ್ಐವಿಯಂತಹ ಸೋಂಕುಗಳ ಅಪಾಯವನ್ನು ಕಡಿಮೆ ಮಾಡುವುದು ಇದರ ಉದ್ದೇಶ.
ಟ್ಯಾಟೂದಿಂದ ಬರುತ್ತಿದೆ ಹೆಚ್ಐವಿ, ಕ್ಯಾನ್ಸರ್!
ಚರ್ಮ ಕ್ಯಾನ್ಸರ್, ಹೆಚ್ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ ಹಾಗೂ ಸ್ಟ್ಯಾಫಿಲೋಕೊಕಸ್ ಔರೆಸ್ನಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಿದಾಗ ಈ ಸೋಂಕುಗಳು ಹರಡಲು ಟ್ಯೂಟೂ ಕೂಡ ಒಂದು ಕಾರಣವಾಗಿದೆ. ಹೀಗಾಗಿ, ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ.
MES ಪುಂಡರು ಕನ್ನಡಿಗರ ತಂಟೆಗೆ ಬಂದ್ರೆ ಸರಿ ಇರಲ್ಲ!: MES ಪುಂಡರಿಗೆ ಎಚ್ಚರಿಕೆ ಕೊಟ್ಟ ಕನ್ನಡಾಂಬೆ ರಕ್ಷಣಾ ವೇದಿಕೆ
ಹೊಸ ಕಾನೂನು ಯಾವ ರೀತಿ ಇರಲಿದೆ?
ದೇಶದಲ್ಲಿ ಟ್ಯಾಟೂಗೆ ಯಾವುದೇ ನಿಯಂತ್ರಣ ಕಾನೂನುಗಳಿಲ್ಲ. ಮೊದಲ ಬಾರಿಗೆ ರಾಜ್ಯ ಸರ್ಕಾರ ಟ್ಯಾಟೂಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ಪತ್ರ ಪಡೆದಿರಬೇಕು. ಟ್ಯಾಟೂ ಹಾಕುವರು ತಾವು ಬಳಸುವ ಬಣ್ಣ, ಕ್ಯಮಿಕಲ್, ಸೂಜಿ ಮತ್ತು ಸ್ವಚ್ಛತೆ ಕುರಿತಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಹ ಹೊಸ ಮಾರ್ಗಸೂಚಿಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.




