ಟ್ಯಾಟೂ ಪ್ರಿಯರಿಗೂ ಶಾಕ್, ಆರೋಗ್ಯ ಇಲಾಖೆ ಅಲರ್ಟ್: ಟ್ಯಾಟೂನಿಂದ ಬರುತ್ತೆ ಹೆಚ್ಐವಿ, ಕ್ಯಾನ್ಸರ್!

ಬೆಂಗಳೂರು: ಟ್ಯಾಟೂ (Tattoo) ಪ್ರಿಯರಿಗೂ ಶಾಕ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ಸರ್ಕಾರವು ಟ್ಯಾಟೂ ಹಾಕಿಸಿಕೊಳ್ಳುವ ಮತ್ತು ಹಾಕುವವರಮೇಲೆ ಹೊಸ ಕಾನೂನು ಜಾರಿಗೆ ತರಲು ಯೋಜಿಸಿದೆ. ಇದು ಅನೈರ್ಮಲ್ಯದಿಂದ ಉಂಟಾಗುವ ಸೋಂಕು ತಡೆಯುವ ಉದ್ದೇಶ ಹೊಂದಿದೆ. ಈ ಕಾನೂನು ಟ್ಯಾಟೂ ಆರ್ಟಿಸ್ಟ್ಗಳಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊಂದಿರುತ್ತದೆ. ಚರ್ಮದ ಕ್ಯಾನ್ಸರ್ ಮತ್ತು ಹೆಚ್ಐವಿಯಂತಹ ಸೋಂಕುಗಳ ಅಪಾಯವನ್ನು ಕಡಿಮೆ ಮಾಡುವುದು ಇದರ ಉದ್ದೇಶ.
ಟ್ಯಾಟೂದಿಂದ ಬರುತ್ತಿದೆ ಹೆಚ್ಐವಿ, ಕ್ಯಾನ್ಸರ್!
ಚರ್ಮ ಕ್ಯಾನ್ಸರ್, ಹೆಚ್ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ ಹಾಗೂ ಸ್ಟ್ಯಾಫಿಲೋಕೊಕಸ್ ಔರೆಸ್ನಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಿದಾಗ ಈ ಸೋಂಕುಗಳು ಹರಡಲು ಟ್ಯೂಟೂ ಕೂಡ ಒಂದು ಕಾರಣವಾಗಿದೆ. ಹೀಗಾಗಿ, ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ.

MES ಪುಂಡರು ಕನ್ನಡಿಗರ ತಂಟೆಗೆ ಬಂದ್ರೆ ಸರಿ ಇರಲ್ಲ!: MES ಪುಂಡರಿಗೆ ಎಚ್ಚರಿಕೆ ಕೊಟ್ಟ ಕನ್ನಡಾಂಬೆ ರಕ್ಷಣಾ ವೇದಿಕೆ
ಹೊಸ ಕಾನೂನು ಯಾವ ರೀತಿ ಇರಲಿದೆ?
ದೇಶದಲ್ಲಿ ಟ್ಯಾಟೂಗೆ ಯಾವುದೇ ನಿಯಂತ್ರಣ ಕಾನೂನುಗಳಿಲ್ಲ. ಮೊದಲ ಬಾರಿಗೆ ರಾಜ್ಯ ಸರ್ಕಾರ ಟ್ಯಾಟೂಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ಪತ್ರ ಪಡೆದಿರಬೇಕು. ಟ್ಯಾಟೂ ಹಾಕುವರು ತಾವು ಬಳಸುವ ಬಣ್ಣ, ಕ್ಯಮಿಕಲ್, ಸೂಜಿ ಮತ್ತು ಸ್ವಚ್ಛತೆ ಕುರಿತಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಹ ಹೊಸ ಮಾರ್ಗಸೂಚಿಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!