ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ….

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ. ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್