ಡಿಕೆಶಿ ಅವರ ಪ್ರವಾಹ ವೀಕ್ಷಣೆಯ ಭೇಟಿ ಕುರಿತು ನೇರ ಪ್ರಶ್ನೆ ಮಾಡಿದ ಹೆಚ್.ಡಿ.ಕೆ….

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ. ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿಕೆ ಕೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್ ಡಿಕೆ ಪ್ರಶ್ನೆ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!