ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!