ಡೆಡ್ಲಿ ಜೋಫ್ರಾ ಆರ್ಚರ್ 4 ವರ್ಷಗಳ ಬಳಿಕ ಮತ್ತೆ ಕಣಕ್ಕಿಳಿದಿದ್ದಾರೆ….

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಫಸ್ಟ್ ಕ್ಲಾಸ್ ಕ್ರಿಕೆಟ್​ಗೆ ಮತ್ತೆ ಮರಳಿದ್ದಾರೆ. ಅದು ಕೂಡ ಬರೋಬ್ಬರಿ 4 ವರ್ಷಗಳ ಬಳಿಕ. ಫಿಟ್​ನೆಸ್ ಸಮಸ್ಯೆಯ ಕಾರಣ ವರ್ಷಗಳ ಕಾಲ ಇಂಗ್ಲೆಂಡ್ ತಂಡದಿಂದ ಹೊರಗುಳಿದಿದ್ದ ಆರ್ಚರ್ ಇತ್ತೀಚೆಗಷ್ಟೇ ಸೀಮಿತ ಓವರ್​ಗಳ ಸರಣಿಗಳಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ದೀರ್ಘಾವಧಿಯ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ವರ್ಷಗಳ ಬಳಿಕ ಆರ್ಚರ್ ರೆಡ್ ಬಾಲ್​ ಕ್ರಿಕೆಟ್​ಗೆ ಮರಳಿದ್ದಾರೆ.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್​ಶಿಪ್ ಟೆಸ್ಟ್ ಟೂರ್ನಿಯಲ್ಲಿ ಜೋಫ್ರಾ ಆರ್ಚರ್ ಸಸೆಕ್ಸ್ ತಂಡದ ಪರ ಕಣಕ್ಕಿಳಿದಿದ್ದಾರೆ. ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್‌ಸೈಡ್ ಮೈದಾನದಲ್ಲಿ ನಡೆದ ಡರ್ಹ್ಯಾಮ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಆರ್ಚರ್ ಮೊದಲ ಇನಿಂಗ್ಸ್​ನಲ್ಲಿ 18 ಓವರ್​ಗಳನ್ನು ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಕೇವಲ 32 ರನ್ ನೀಡಿ ಒಂದು ವಿಕೆಟ್ ಪಡೆದಿದ್ದಾರೆ. ಈ ಮೂಲಕ ಜೋಫ್ರಾ ಆರ್ಚರ್ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದ್ದಾರೆ.ಇತ್ತ ಕೌಂಟಿ ಕ್ರಿಕೆಟ್​ನಲ್ಲಿ ಆರ್ಚರ್ 18 ಓವರ್​ಗಳನ್ನು ಎಸೆಯುಲು ಯಶಸ್ವಿಯಾಗಿರುವ ಕಾರಣ ಅವರನ್ನು ಭಾರತದ ವಿರುದ್ಧದ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಮರಳುವ ಸಲುವಾಗಿಯೇ ಆರ್ಚರ್ ಮತ್ತೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕಣಕ್ಕಿಳಿದಿದ್ದಾರೆ. ಅದರಲ್ಲೂ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯ ಮುಗಿದರೂ ಇನ್ನೂ 4 ಮ್ಯಾಚ್​ಗಳು ಬಾಕಿಯಿವೆ. ಹೀಗಾಗಿ ಈ ಸರಣಿಯ ಮೂಲಕವೇ ಕಂಬ್ಯಾಕ್ ಮಾಡಲು ಜೋಫ್ರಾ ಆರ್ಚರ್ ಪ್ಲ್ಯಾನ್ ರೂಪಿಸಿದ್ದಾರೆ. ಅದರಂತೆ ಭಾರತದ ವಿರುದ್ಧದ ಎರಡನೇ ಅಥವಾ ಮೂರನೇ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಜೋಫ್ರಾ ಆರ್ಚರ್ ಇಂಗ್ಲೆಂಡ್ ತಂಡವನ್ನು ಸೇರಿಕೊಂಡರೆ ಆಂಗ್ಲರ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ. ಅದರಲ್ಲೂ ಮಾರಕ ಬೌನ್ಸರ್​ಗೆ ಹೆಸರುವಾಸಿಯಾಗಿರುವ ಆರ್ಚರ್ ಎದುರಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಜೋಫ್ರಾ ಎಂಟ್ರಿಗೂ ಮುನ್ನ ಟೀಮ್ ಇಂಡಿಯಾ ಬ್ಯಾಟರ್​ಗಳು ಘಾತಕ ಎಸೆತಗಳನ್ನು ಎದುರಿಸಲು ಸಜ್ಜಾಬೇಕಿರುವುದು ಅನಿವಾರ್ಯ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!