ತಮ್ಮ ಸಂಗಾತಿಗಳಿಗೆ ಬಲು ನಿಷ್ಠೆಯಿಂದಿರುವ ಜೀವಿಗಳಿವು;

ಹೌದು ವೀಕ್ಷಕರೇ, ಮನುಷ್ಯರೇ ಆಗಿರಲಿ ಅಥವಾ ಪ್ರಾಣಿಗಳೇ ಆಗಿರಲಿ ಪ್ರೀತಿಯಲ್ಲಿ ಆಕರ್ಷಣೆ ಕಳೆದುಕೊಂಡಾಗ ಇನ್ನೊರ್ವರತ್ತ ಆಕರ್ಷಿತರಾಗುವುದು ಆಶ್ಚರ್ಯವೇನಲ್ಲ. ಅದರಲ್ಲೂ ಇಂದಿನ ಆಧುನಿಕ ಯುಗದಲ್ಲಿ ಮನುಷ್ಯರಲ್ಲಿ ಪ್ರೀತಿ, ಪ್ರೇಮ, ಸಂಬಂಧಕ್ಕೆ ಬೆಲೆಯೇ ಇಲ್ಲದಂತಾಗಿದೆ. ಡಿವೋರ್ಸ್, ಪ್ರೀತಿಯಲ್ಲಿ ಮೋಸ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಆದ್ರೆ ಈ ಕೆಲವೊಂದಿಷ್ಟು ಜೀವಿಗಳು ಪ್ರೀತಿಯಲ್ಲಿ ತಮ್ಮ ಸಂಗಾತಿಗೆ ಜೀವನದುದ್ದಕ್ಕೂ ತುಂಬಾನೇ ನಿನಿಷ್ಠೆಯಿಂದ ಇರುತ್ತವಂತೆ. ಒಂದು ವೇಳೆ ತನ್ನ ಸಂಗಾತಿ ಸಾವನ್ನಪ್ಪಿದರೆ ಆ ಜೀವಿ ಒಂಟಿಯಾಗಿಯೇ ಜೀವನಪರ್ಯಂತ ಬದುಕುತ್ತವಂತೆ. ಹಾಗಿದ್ರೆ ತಮ್ಮ ಸಂಗಾತಿಗೆ ತುಂಬಾನೇ ನಿಷ್ಠವಾಗಿರುವ ಜೀವಿಗಳು ಯಾವುದೆಂಬುದನ್ನು ನೋಡೋಣ ಬನ್ನಿ.

ಹಂಸಗಳು: ಹಂಸ ಜೋಡಿಗಳನ್ನು ಪ್ರೀತಿಯ ನಿಜವಾದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಒಂದು ಹಂಸವು ಇನ್ನೊಂದರೊಂದಿಗೆ ಜೋಡಿಯಾದ ನಂತರ, ಅವು ಒಟ್ಟಿಗೆ ಗೂಡುಗಳನ್ನು ನಿರ್ಮಿಸುತ್ತವೆ, ಮಕ್ಕಳನ್ನು ಒಟ್ಟಿಗೆ ಬೆಳೆಸುತ್ತವೆ ಮತ್ತು ಪೋಷಕರ ಕರ್ತವ್ಯಗಳನ್ನು ಹಂಚಿಕೊಳ್ಳುತ್ತವೆ .

ತೋಳಗಳು: ತೋಳಗಳು ಅಪಾಯಕಾರಿಯಾಗಿ ಕಾಣುತ್ತವೆ, ಆದರೆ ಅವುಗಳು ಪ್ರೀತಿಯ ವಿಚಾರದಲ್ಲಿ ತುಂಬಾನೇ ಸೌಮ್ಯವಾಗಿರುತ್ತವೆ. ಅವುಗಳು ತಮ್ಮ ಕುಟುಂಬ ಮತ್ತು ಸಂಗಾತಿಗೆ ಬಹಳ ನಿಷ್ಠವಾಗಿರುತ್ತವೆ.

ಬೋಳು ಹದ್ದು: ಅಮೆರಿಕ ರಾಷ್ಟ್ರೀಯ ಪಕ್ಷಿಯಾದ ಬೋಳು ಹದ್ದುಗಳು ತಮ್ಮ ಸಂಗಾತಿಗೆ ತುಂಬಾನೇ ನಿಷ್ಠವಾಗಿರುತ್ತವೆ. ಒಮ್ಮೆ ಅವು ಸಂಗಾತಿಯನ್ನು ಆರಿಸಿಕೊಂಡರೆ, ಅವು ಜೀವನಪರ್ಯಂತ ಒಂದೇ ಸಂಗಾತಿಯ ಜೊತೆಗೆ ಜೀವಿಸುತ್ತವೆ.

ಪೆಂಗ್ವಿನ್: ಪೆಂಗ್ವಿನ್ಗಳು ತಮ್ಮ ಜೀವನದುದ್ದಕ್ಕೂ ಒಂದೇ ಸಂಗಾತಿಯೊಂದಿಗೆ ಇರುತ್ತವೆ. ಅವುಗಳು ಒಟ್ಟಿಗೆ ಮರಿಗಳನ್ನು ನೋಡಿಕೊಳ್ಳುತ್ತವೆ. ಪೆಂಗ್ವಿನ್ಗಳ ನಡುವಿನ ಪ್ರೀತಿಯ ಭಾವನೆ ತುಂಬಾ ಪ್ರಬಲವಾಗಿರುತ್ತದೆ.

ಬೀವರ್ಗಳು: ಬೀವರ್ಗಳನ್ನು ವಿಶ್ವದ ಅತ್ಯಂತ ಶ್ರಮಶೀಲ ಪ್ರಾಣಿಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಅತ್ಯುತ್ತಮ ಎಂಜಿನಿಯರ್ ಅಂತಲೇ ಹೆಸರುವಾಸಿಯಾಗಿರುವ ಈ ಪುಟ್ಟ ಬೀವರ್ಗಳು ಪ್ರೀತಿ, ಸಂಬಂಧದ ವಿಚಾರದಲ್ಲೂ ತುಂಬಾನೇ ನಿಷ್ಠವಾಗಿರುತ್ತವೆ.

ಗಿಬ್ಬನ್ಸ್: ಮಂಗನ ಜಾತಿಗೆ ಸೇರಿದ ಈ ಪ್ರಾಣಿಗಳು ತಮ್ಮ ಸಂಗಾತಿಗಳೊಂದಿಗೆ ನಿಕಟ ಬಂಧಗಳನ್ನು ಸೃಷ್ಟಿಸುತ್ತವೆ. ಅವು ತಮ್ಮ ಮರಿಗಳನ್ನು ಒಟ್ಟಿಗೆ ಬೆಳೆಸುತ್ತವೆ ಮತ್ತು ಹೆಚ್ಚಿನ ಸಮಯವನ್ನು ತಮ್ಮ ಸಂಗಾತಿಯೊಂದಿಗೆ ಕಳೆಯುತ್ತವೆ. ತಮ್ಮ ಸಂಗಾತಿ ಸತ್ತರೆ ಒಂಟಿಯಾಗಿ ವಾಸಿಸುತ್ತವೆ.

 

 

 

 

 

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು