ತಾಯಿಯ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಒಂದು ವಾರ ತಾಯಿಯ ಹೆ*ದೊಂದಿಗೆ ಕಾಲ ಕಳೆದ ಹೆಣ್ಣು ಮಕ್ಕಳು.

ಹೌದು ಇಂತಹದೊಂದು ದುರ್ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತಾಯಿ ಮೃತಪಟ್ಟ ಬಳಿಕ ಅಂತ್ಯಕ್ರಿಯೆಗೂ ಹಣವಿಲ್ಲದೇ ಇಬ್ಬರು ಹೆಣ್ಣುಮಕ್ಕಳು ಕಂಗಾಲಾಗಿ ಒಂದು ವಾರದ ಕಾಲ ತಾಯಿ ಶವದೊಂದಿಗೆ ಕಾಲ ಕಳೆದಿದ್ದಾರೆ.
ಹೌದು ,ಅವರು ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ತಾಯಿ. ವಯಸ್ಸಿಗೂ ಮುನ್ನವೇ ಸಾವನ್ನಪ್ಪಿದ್ದರಿಂದ ಮಕ್ಕಳಿಗೆ ಜವಾಬ್ದಾರಿಯನ್ನೂ ಕಲಿಸಿಲ್ಲ. ಹಣಕಾಸಿನ ವ್ಯವಹಾರವನ್ನೂ ಕಲಿಸಿಲ್ಲ. ಹೀಗಾಗಿ, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ರಾತ್ರಿ ಮಲಗಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತಾಯಿ ಸತ್ತ ನಂತರ ಹೇಗೆ ಅಂತ್ಯಕ್ರಿಯೆ ಮಾಡಬೇಕು ಎಂಬ ಬಗ್ಗೆ ಮಾಹಿತಿ ಇಲ್ಲದೇ ಹಾಗೂ ಅಂತ್ಯಕ್ರಿಯೆ ನಡೆಸಲು ಹಣವೂ ಇಲ್ಲದೇ ಇಬ್ಬರು ಹೆಣ್ಣು ಮಕ್ಕಳು ಒಂದು ವಾರದ ಕಾಲ ತಾಯಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಒಂದು ವಾರದವರೆಗೂ ಮಕ್ಕಳ ಸಹಾಯಕ್ಕೆ ಯಾರು ಬರದೇ ಇರುವುದು ನಂಬಲಾರ್ಹವಾಗಿದೆ.

ಈ ಘಟನೆ ಹೈದರಾಬಾದ್ ನಗರದ ಹಿರ ಭಾಗದಲ್ಲಿ ನಡೆದಿದೆ. ಹೈದರಾಬಾದ್ ಹೊರವಲಯದಲ್ಲಿ ಸುತ್ತಮುತ್ತಲೂ ಯಾವುದೇ ಮನೆಗಳ್ಳಿಲ್ಲದೇ ಒಂಟಿಯಾಗಿದ್ದ ಮನೆಯಲ್ಲಿ ತಾಯಿ ಹಾಗೂ ಇಬ್ಬರು ವಯಸ್ಕ ಹೆಣ್ಣು ಮಕ್ಕಳಿದ್ದಾರೆ. ಆದರೆ, ತಾಯಿ ಮಕ್ಕಳಿಗೆ ಮನೆ ಜವಾಬ್ದಾರಿ ಹಾಗೂ ಆರ್ಥಿಕ ವ್ಯವಹಾರ ಜ್ಞಾನದ ಬಗ್ಗೆ ಏನನ್ನೂ ಕಲಿಸಿಲ್ಲ. ತಾಯಿಯೇ ದುಡಿಯುತ್ತಾ ಮನೆ ನಿರ್ವಹಣೆ ಮಾಡಿಕೊಂಡು ಬಂದಿದ್ದಾರೆ. ಇನ್ನು ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದ ತಾಯಿ ಅನಾರೋಗ್ಯದಿಂದ ಚೇತರಿಕೆ ಕಾಣದೇ ಜ.23ರಂದು ಮಲಗಿದ್ದ ಸ್ಥಳದಲ್ಲಿಯೇ ರಾತ್ರಿ ಕೊನೆಯುಸಿರು ಎಳೆದಿದ್ದಾರೆ. ಇದಾದ ನಂತರ ಬೆಳಗ್ಗೆ ಮಕ್ಕಳು ಬಂದು ತಾಯಿಯನ್ನು ಎಬ್ಬಿಸಿದಾಗ ಅಮ್ಮ ಎದ್ದೇಳಲಿಲ್ಲ. ಆಗ ಅಕ್ಕ-ತಂಗಿ ಇಬ್ಬರೂ ಅಮ್ಮನನ್ನು ಪರೀಕ್ಷೆ ಮಾಡಿದಾಗ ಆಕೆಯ ಉಸಿರು ನಿಂತು ಹೋಗಿದ್ದು, ಎದೆಬಡಿತವೂ ನಿಂತು ಹೋಗಿ ದೇಹ ತಣ್ಣಗಾಗಿತ್ತು. ಇದರಿಂದ ಭಯಭೀತರಾದ ಮಕ್ಕಳಿಬ್ಬರೂ ಆತಂಕಕ್ಕೆ ಒಳಗಾಗಿದ್ದಾರೆ. ಅಮ್ಮನನ್ನು ಕಳೆದುಕೊಂಡು ಮುಂದೆ ಏನು ಮಾಡಬೇಕು ಎಂದು ತಿಳಿಯದೇ ಖಿನ್ನತೆಗೆ ಒಳಗಾಗಿದ್ದಾರೆ. ಮುಂದೇನು ಮಾಡಬೇಕು ಎಂಬ ಅರಿವು ಸಹ ಆ ಇಬ್ಬರು ಹೆಣ್ಣು ಮಕ್ಕಳಿಗೆ ಇರಲಿಲ್ಲ.
ಇದಾದ ನಂತರ, ತಮ್ಮ ಮನೆಗೆ ಓಟು ಕೇಳಲು ಬಂದಿದ್ದ ಶಾಸಕರ ಮನೆಗೆ ತೆರಳಿ ತಮ್ಮ ತಾಯಿಯ ಅಂತ್ಯಕ್ರಿಯೆ ಹಣವಿಲ್ಲ ಕೊಡಿ ಎಂದು ಕೇಳಿದಾಗ ಈ ಘಟನೆ ಬಯಲಿಗೆ ಬಂದಿದೆ.ಹೈದರಾಬಾದ್ ನಗರದ ಒಂಟಿ ಮನೆಯಲ್ಲಿ ವಾಸವಿದ್ದ ತಾಯಿ (45) ಜನವರಿ 23 ರಂದು ತೀರಿಕೊಂಡಿದ್ದಾರೆ. ಬೆಳಿಗ್ಗೆ ತಾಯಿ ನಿದ್ದೆಯಿಂದ ಎದ್ದೇಳದಿದ್ದಾಗ ಹೆಣ್ಣುಮಕ್ಕಳು ಪರಿಶೀಲಿಸಿದಾಗ ನಾಡಿಮಿಡಿತ, ಉಸಿರಾಟ ಅಥವಾ ಹೃದಯ ಬಡಿತ ಇಲ್ಲ ಎಂದು ತಿಳಿದುಬಂದಿದೆ. ಇದರಿಂದ ಮೃತ ಮಹಿಳೆಯ 25 ವರ್ಷ ಮತ್ತು 22 ವರ್ಷದ ಹೆಣ್ಣುಮಕ್ಕಳು ತಾಯಿಯ ಖಿನ್ನತೆಗೆ ಒಳಗಾಗಿದ್ದರು. ತಾಯಿ ತೀರಿಕೊಂಡಿದ್ದಾರೆ ಎಂದು ತಿಳಿದ ನಂತರ ಇಬ್ಬರೂ ಬಾಗಿಲು ಮುಚ್ಚಿಕೊಂಡು ಮನೆಯಲ್ಲೇ ಶವದೊಂದಿಗೆ ಒಂದು ವಾರಕ್ಕೂ ಹೆಚ್ಚು ಕಾಲ ಕಳೆದಿದ್ದಾರೆ. ಜನವರಿ 31 ರಂದು ಪೊಲೀಸರು ಇವರನ್ನು ಸಂಪರ್ಕಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಹೌದು ಬೇರೆ ಯಾವುದೇ ಜನಸಂಪರ್ಕವಿಲ್ಲದ ಆ ಊರಿನಲ್ಲಿ ತಾಯಿ ಮತ್ತು ಮಕ್ಕಳು ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರಿಂದ ಒಂದು ವಾರ ಕಳೆದರೂ ಸಹ ನೆರೆಹೊರೆಯವರಿಗೆ ದುರ್ವಾಸನೆ ಬಂದಿರಲಿಲ್ಲ. ಜನವರಿ 31 ರಂದು ಮನೆಯಿಂದ ಹೊರಬಂದ ಇಬ್ಬರೂ ಶಾಸಕರ ಕಚೇರಿಗೆ ತೆರಳಿ, ನಮ್ಮ ತಾಯಿ ತೀರಿಕೊಂಡಿದ್ದಾರೆ. ಅವರ ಅಂತ್ಯಕ್ರಿಯೆಗೆ ನಮ್ಮ ಬಳಿ ಹಣವಿಲ್ಲ ಎಂದು ತಿಳಿಸಿದ್ದಾರೆ. ಶಾಸಕರ ಕಚೇರಿಯಿಂದ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಲಾಯಿತು. ಬಳಿಕ ಪೊಲೀಸರ ನೇತೃತ್ವದಲ್ಲಿ ಇಬ್ಬರೂ ಮಕ್ಕಳನ್ನು ಸಂಪರ್ಕ ಮಾಡಿದಾಗ ಅವರ ತಾಯಿ ಮೃತಪಟ್ಟು ಒಂದು ವಾರವೇ ಕಳೆದಿದ್ದು, ದುರ್ವಾಸನೆ ಬಂದಿದ್ದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಮಾಡಿದ ನಂತರ ಕಚೇರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಇನ್ನು ಮುಂದೆ ಆ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಾಯಿ ಇಲ್ಲದೆ, ಜವಾಬ್ದಾರಿಯುತ ಬದುಕನ್ನು ನಡೆಸಬೇಕಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!