ತಾಯಿಯ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೆ ಒಂದು ವಾರ ತಾಯಿಯ ಹೆ*ದೊಂದಿಗೆ ಕಾಲ ಕಳೆದ ಹೆಣ್ಣು ಮಕ್ಕಳು.

ಹೌದು ಇಂತಹದೊಂದು ದುರ್ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ತಾಯಿ ಮೃತಪಟ್ಟ ಬಳಿಕ ಅಂತ್ಯಕ್ರಿಯೆಗೂ ಹಣವಿಲ್ಲದೇ ಇಬ್ಬರು ಹೆಣ್ಣುಮಕ್ಕಳು ಕಂಗಾಲಾಗಿ ಒಂದು ವಾರದ ಕಾಲ ತಾಯಿ ಶವದೊಂದಿಗೆ ಕಾಲ ಕಳೆದಿದ್ದಾರೆ.
ಹೌದು ,ಅವರು ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ತಾಯಿ. ವಯಸ್ಸಿಗೂ ಮುನ್ನವೇ ಸಾವನ್ನಪ್ಪಿದ್ದರಿಂದ ಮಕ್ಕಳಿಗೆ ಜವಾಬ್ದಾರಿಯನ್ನೂ ಕಲಿಸಿಲ್ಲ. ಹಣಕಾಸಿನ ವ್ಯವಹಾರವನ್ನೂ ಕಲಿಸಿಲ್ಲ. ಹೀಗಾಗಿ, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ರಾತ್ರಿ ಮಲಗಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತಾಯಿ ಸತ್ತ ನಂತರ ಹೇಗೆ ಅಂತ್ಯಕ್ರಿಯೆ ಮಾಡಬೇಕು ಎಂಬ ಬಗ್ಗೆ ಮಾಹಿತಿ ಇಲ್ಲದೇ ಹಾಗೂ ಅಂತ್ಯಕ್ರಿಯೆ ನಡೆಸಲು ಹಣವೂ ಇಲ್ಲದೇ ಇಬ್ಬರು ಹೆಣ್ಣು ಮಕ್ಕಳು ಒಂದು ವಾರದ ಕಾಲ ತಾಯಿಯ ಶವದೊಂದಿಗೆ ದಿನ ಕಳೆದಿದ್ದಾರೆ. ಒಂದು ವಾರದವರೆಗೂ ಮಕ್ಕಳ ಸಹಾಯಕ್ಕೆ ಯಾರು ಬರದೇ ಇರುವುದು ನಂಬಲಾರ್ಹವಾಗಿದೆ.

ಈ ಘಟನೆ ಹೈದರಾಬಾದ್ ನಗರದ ಹಿರ ಭಾಗದಲ್ಲಿ ನಡೆದಿದೆ. ಹೈದರಾಬಾದ್ ಹೊರವಲಯದಲ್ಲಿ ಸುತ್ತಮುತ್ತಲೂ ಯಾವುದೇ ಮನೆಗಳ್ಳಿಲ್ಲದೇ ಒಂಟಿಯಾಗಿದ್ದ ಮನೆಯಲ್ಲಿ ತಾಯಿ ಹಾಗೂ ಇಬ್ಬರು ವಯಸ್ಕ ಹೆಣ್ಣು ಮಕ್ಕಳಿದ್ದಾರೆ. ಆದರೆ, ತಾಯಿ ಮಕ್ಕಳಿಗೆ ಮನೆ ಜವಾಬ್ದಾರಿ ಹಾಗೂ ಆರ್ಥಿಕ ವ್ಯವಹಾರ ಜ್ಞಾನದ ಬಗ್ಗೆ ಏನನ್ನೂ ಕಲಿಸಿಲ್ಲ. ತಾಯಿಯೇ ದುಡಿಯುತ್ತಾ ಮನೆ ನಿರ್ವಹಣೆ ಮಾಡಿಕೊಂಡು ಬಂದಿದ್ದಾರೆ. ಇನ್ನು ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದ ತಾಯಿ ಅನಾರೋಗ್ಯದಿಂದ ಚೇತರಿಕೆ ಕಾಣದೇ ಜ.23ರಂದು ಮಲಗಿದ್ದ ಸ್ಥಳದಲ್ಲಿಯೇ ರಾತ್ರಿ ಕೊನೆಯುಸಿರು ಎಳೆದಿದ್ದಾರೆ. ಇದಾದ ನಂತರ ಬೆಳಗ್ಗೆ ಮಕ್ಕಳು ಬಂದು ತಾಯಿಯನ್ನು ಎಬ್ಬಿಸಿದಾಗ ಅಮ್ಮ ಎದ್ದೇಳಲಿಲ್ಲ. ಆಗ ಅಕ್ಕ-ತಂಗಿ ಇಬ್ಬರೂ ಅಮ್ಮನನ್ನು ಪರೀಕ್ಷೆ ಮಾಡಿದಾಗ ಆಕೆಯ ಉಸಿರು ನಿಂತು ಹೋಗಿದ್ದು, ಎದೆಬಡಿತವೂ ನಿಂತು ಹೋಗಿ ದೇಹ ತಣ್ಣಗಾಗಿತ್ತು. ಇದರಿಂದ ಭಯಭೀತರಾದ ಮಕ್ಕಳಿಬ್ಬರೂ ಆತಂಕಕ್ಕೆ ಒಳಗಾಗಿದ್ದಾರೆ. ಅಮ್ಮನನ್ನು ಕಳೆದುಕೊಂಡು ಮುಂದೆ ಏನು ಮಾಡಬೇಕು ಎಂದು ತಿಳಿಯದೇ ಖಿನ್ನತೆಗೆ ಒಳಗಾಗಿದ್ದಾರೆ. ಮುಂದೇನು ಮಾಡಬೇಕು ಎಂಬ ಅರಿವು ಸಹ ಆ ಇಬ್ಬರು ಹೆಣ್ಣು ಮಕ್ಕಳಿಗೆ ಇರಲಿಲ್ಲ.
ಇದಾದ ನಂತರ, ತಮ್ಮ ಮನೆಗೆ ಓಟು ಕೇಳಲು ಬಂದಿದ್ದ ಶಾಸಕರ ಮನೆಗೆ ತೆರಳಿ ತಮ್ಮ ತಾಯಿಯ ಅಂತ್ಯಕ್ರಿಯೆ ಹಣವಿಲ್ಲ ಕೊಡಿ ಎಂದು ಕೇಳಿದಾಗ ಈ ಘಟನೆ ಬಯಲಿಗೆ ಬಂದಿದೆ.ಹೈದರಾಬಾದ್ ನಗರದ ಒಂಟಿ ಮನೆಯಲ್ಲಿ ವಾಸವಿದ್ದ ತಾಯಿ (45) ಜನವರಿ 23 ರಂದು ತೀರಿಕೊಂಡಿದ್ದಾರೆ. ಬೆಳಿಗ್ಗೆ ತಾಯಿ ನಿದ್ದೆಯಿಂದ ಎದ್ದೇಳದಿದ್ದಾಗ ಹೆಣ್ಣುಮಕ್ಕಳು ಪರಿಶೀಲಿಸಿದಾಗ ನಾಡಿಮಿಡಿತ, ಉಸಿರಾಟ ಅಥವಾ ಹೃದಯ ಬಡಿತ ಇಲ್ಲ ಎಂದು ತಿಳಿದುಬಂದಿದೆ. ಇದರಿಂದ ಮೃತ ಮಹಿಳೆಯ 25 ವರ್ಷ ಮತ್ತು 22 ವರ್ಷದ ಹೆಣ್ಣುಮಕ್ಕಳು ತಾಯಿಯ ಖಿನ್ನತೆಗೆ ಒಳಗಾಗಿದ್ದರು. ತಾಯಿ ತೀರಿಕೊಂಡಿದ್ದಾರೆ ಎಂದು ತಿಳಿದ ನಂತರ ಇಬ್ಬರೂ ಬಾಗಿಲು ಮುಚ್ಚಿಕೊಂಡು ಮನೆಯಲ್ಲೇ ಶವದೊಂದಿಗೆ ಒಂದು ವಾರಕ್ಕೂ ಹೆಚ್ಚು ಕಾಲ ಕಳೆದಿದ್ದಾರೆ. ಜನವರಿ 31 ರಂದು ಪೊಲೀಸರು ಇವರನ್ನು ಸಂಪರ್ಕಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಹೌದು ಬೇರೆ ಯಾವುದೇ ಜನಸಂಪರ್ಕವಿಲ್ಲದ ಆ ಊರಿನಲ್ಲಿ ತಾಯಿ ಮತ್ತು ಮಕ್ಕಳು ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರಿಂದ ಒಂದು ವಾರ ಕಳೆದರೂ ಸಹ ನೆರೆಹೊರೆಯವರಿಗೆ ದುರ್ವಾಸನೆ ಬಂದಿರಲಿಲ್ಲ. ಜನವರಿ 31 ರಂದು ಮನೆಯಿಂದ ಹೊರಬಂದ ಇಬ್ಬರೂ ಶಾಸಕರ ಕಚೇರಿಗೆ ತೆರಳಿ, ನಮ್ಮ ತಾಯಿ ತೀರಿಕೊಂಡಿದ್ದಾರೆ. ಅವರ ಅಂತ್ಯಕ್ರಿಯೆಗೆ ನಮ್ಮ ಬಳಿ ಹಣವಿಲ್ಲ ಎಂದು ತಿಳಿಸಿದ್ದಾರೆ. ಶಾಸಕರ ಕಚೇರಿಯಿಂದ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಲಾಯಿತು. ಬಳಿಕ ಪೊಲೀಸರ ನೇತೃತ್ವದಲ್ಲಿ ಇಬ್ಬರೂ ಮಕ್ಕಳನ್ನು ಸಂಪರ್ಕ ಮಾಡಿದಾಗ ಅವರ ತಾಯಿ ಮೃತಪಟ್ಟು ಒಂದು ವಾರವೇ ಕಳೆದಿದ್ದು, ದುರ್ವಾಸನೆ ಬಂದಿದ್ದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಮಾಡಿದ ನಂತರ ಕಚೇರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಇನ್ನು ಮುಂದೆ ಆ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಾಯಿ ಇಲ್ಲದೆ, ಜವಾಬ್ದಾರಿಯುತ ಬದುಕನ್ನು ನಡೆಸಬೇಕಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!