ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು….

ರಾಜ್ಯದಲ್ಲಿ ಹೆಸರು ನೋಂದಾಯಿಸಿಕೊಂಡ 7,13,862 ವಿದ್ಯಾರ್ಥಿಗಳಲ್ಲಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದುಕಲಾವಿಭಾಗ ವಾಣಿಜ್ಯ ವಿಭಾಗ ಹಾಗೂ ವಿಜ್ಞಾನ ವಿಭಾಗ ಈ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

*ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

*ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
*ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 599 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

*ಫಲಿತಾಂಶದ ಅನುಸಾರ ಜಿಲ್ಲೆಗಳು ಪಡೆದುಕೊಂಡ ಕ್ರಮಾಂಕಗಳು….

ಉಡುಪಿ ಫಸ್ಟ್- ಯಾದಗಿರಿ ಲಾಸ್ಟ್ಇನ್ನೂ ಫಲಿತಾಂಶವನ್ನು ಲೆಕ್ಕಾಚಾರ ಮಾಡುವುದಾದರೆ, ರಾಜ್ಯದಲ್ಲಿ ಉಡುಪಿ ಜಿಲ್ಲೆಯು 93.90 ಫಲಿತಾಂಶದ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮಾಂಕವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿಕೊಂಡಿವೆ. ಇನ್ನೂ ಕೊನೆಯ ಸ್ಥಾನವನ್ನು ಪಡೆದುಕೊಂಡ ಜಿಲ್ಲೆ ಎಂದರೆ ಯಾದಗಿರಿ. ಜಿಲ್ಲೆಯು ಶೇಕಡ 48.45 ಫಲಿತಾಂಶವನ್ನು ತನ್ನದಾಗಿಸಿಕೊಳ್ಳುವ ಮುಖಾಂತರ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.53, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ಼್ಞಾನ ವಿಭಾಗದಲ್ಲಿ ಶೇ.82ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದರು.

ಪ್ರತಿವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 3,45,694 ಬಾಲಕಿಯರು ಹಾಜರಾಗಿದ್ದರು. ಈ ಪೈಕಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಶೇ. 77.88ರಷ್ಟು ಬಾಲಕಿಯರು ಉತ್ತೀರ್ಣರಾದಂತಾಗಿದೆ. ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಈ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ.

2 ಹಾಗೂ 3ನೇ ಬಾರಿ ಪರೀಕ್ಷೆ: ಕಳೆದ ವರ್ಷ ಹೋಲಿಸಿದರೆ ಈ ಬಾರಿ ಶೇ.8ರಷ್ಟು ಉತ್ತೀರ್ಣರಾದವರು ಕಡಿಮೆಯಾಗಿದ್ದಾರೆ. ವೆಬ್ ಕಾಸ್ಟ್, ಸಿಸಿಟಿವಿ ಕಣ್ಗಾವಲಿನಿಂದ ಈ ಬಾರಿ ಫಲಿತಾಂಶ ಕಡಿಮೆ ಬಂದಿದೆ ಎಂದು ಹೇಳಲಾಗುತ್ತಿದೆ. ಪಾಸಾಗದ ಆಥವಾ ಹೆಚ್ಚು ಅಂಕ ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಏ.24ರಿಂದ ಮೇ 8ರವರೆಗೆ, ಪರೀಕ್ಷೆ-3 ಜೂ.6ರಿಂದ ಜೂ. 21ರವರೆಗೆ ನಡೆಯಲಿದೆ. 2 ಹಾಗೂ 3ನೇ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವುದಕ್ಕೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಮಂಡಳಿ ತಿಳಿಸಿದೆ.

ಬಂದಿರುವ ಅಂಕಗಳಲ್ಲಿ ತೃಪ್ತಿ ಇಲ್ಲದೆ ಇರುವವರು ಹಾಗೂ ಹೆಚ್ಚಿನ ಅಂಕಗಳಿಗಾಗಿ ಪ್ರಯತ್ನಪಡುವವರು ಹಾಗೂ ಮರು ಪರೀಕ್ಷೆ ಬರೆಯುವವರೆಗೂ ಸಹ ಸದಾ ಅವಕಾಶವನ್ನ ನೀಡಲಾಗಿದೆ ಎಂದು ಮಂಡಳಿ ತಿಳಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!