ನಟಿ ರನ್ಯಾ ರಾವ್​ಗೆ ಒಂದು ವರ್ಷ ಜೈಲೇ ಗತಿ ಜಾಮೀನಿನ​ ಮಾತೇ ಇಲ್ಲ!

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ ಎನ್ನಲಾಗಿದೆ. ಕಠಿಣ ಕಾಯ್ದೆಯಾದ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಿಂದಾಗಿ ಅವರು ಒಂದು ವರ್ಷ ಜೈಲಿನಲ್ಲಿಯೇ ಇರಬೇಕಾಗಿದೆ. ಅವರು ವಿದೇಶದಿಂದ ಚಿನ್ನವನ್ನು ಸಾಗಾಟ ಮಾಡುತ್ತಿದ್ದರು ಮತ್ತು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳಿವೆ.

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಮಾರ್ಚ್ 3ರಂದು ನಟಿ ರನ್ಯಾ ರಾವ್ ಅವರ ಬಂಧನ ಆಯಿತು. ಕಳೆದ ನಾಲ್ಕು ತಿಂಗಳಿಂದ ಅವರು ಜೈಲಿನಲ್ಲೇ ಇದ್ದಾರೆ. ಒಟ್ಟೂ ಒಂದು ವರ್ಷ ಅವರು ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಇದೆ. ಹೇಗಾದರೂ ಮಾಡಿ ಜಾಮೀನು ಪಡೆದು ಹೊರಬರಬೇಕು ಎಂದುಕೊಂಡಿದ್ದ ಅವರಿಗೆ ಈ ವಿಚಾರ ತಿಳಿದು ಮತ್ತಷ್ಟು ಚಿಂತೆ ಉಂಟಾಗಿದೆ. ಹಾಗಾದರೆ ಅವರಿಗೆ ಜಾಮೀನು ಸಿಗದೇ ಇರಲು ಕಾರಣ ಎಂಬುದರ ವಿವರ ಇಲ್ಲಿದೆ.

ರನ್ಯಾ ರಾವ್ ಅವರು ವಿದೇಶದಿಂದ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿದ್ದರು. ಈ ರೀತಿಯಲ್ಲಿ ಅವರು ಈಗಾಗಲೇ ಸಾಕಷ್ಟು ವಂಚನೆ ಮಾಡಿದ್ದಾರೆ. ಇದಕ್ಕೆ ರನ್ಯಾ ಪೊಲೀಸ್ ವ್ಯವಸ್ಥೆಯನ್ನು ಕೂಡ ಬಳಕೆ ಮಾಡಿಕೊಂಡ ಆರೋಪ ಇದೆ. ಅವರ ಬಂಧನದ ಬಳಿಕ ಈ ಜಾಲದ ಉದ್ದ-ಅಗಲ ಗೊತ್ತಾಗಿದೆ. ಅವರು ಬಂಧನಕ್ಕೆ ಒಳಗಾದಾಗಿನಿಂದಲೂ ಜಾಮೀನು ಪಡೆಯುವ ಪ್ರಯತ್ನದಲ್ಲಿ ಇದ್ದರು. ಆದರೆ, ಒಂದು ವರ್ಷಗಳ ಕಾಲ ಅವರು ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಇದೆ.

ರನ್ಯಾ ರಾವ್ ಅವರನ್ನು ಬಂಧಿಸಿದ್ದು ಡಿಆರ್​ಐ ಅಧಿಕಾರಿಗಳು. ರನ್ಯಾ ಹಾಗೂ ಅವರ ಸಹಚರರ ವಿರುದ್ಧ ಕಠಿಣವಾದ ‘ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ನಿಯಂತ್ರಣ ಕಾಯ್ದೆ’ ಕಾಫೆಪೊಸಾ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇದೊಂದು ಕಠಿಣವಾದ ಕಾಯ್ದೆ ಆಗಿದೆ. ಈ ಕಾಯ್ದೆಯ ಅಡಿ ದೂರು ದಾಖಲಾದರೆ ಜಾಮೀನು ನೀಡಲಾಗುವುದಿಲ್ಲ. ಒಂದೊಮ್ಮೆ ಆರೋಪಿಗಳಿಗೆ ಬೇರೆ ಪ್ರಕರಣಗಳಲ್ಲಿ ಜಾಮೀನು ದೊರೆತರೂ ಸಹ ಅವರ ಬಿಡುಗಡೆ ಆಗುವುದಿಲ್ಲ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!