‘ನಟಿ ಸೌಂದರ್ಯಾ ಸಾವು ಆಕಸ್ಮಿಕವಲ್ಲ; 21 ವರ್ಷಗಳ ಬಳಿಕ ದಾಖಲಾಯ್ತು ದೂರು.

ನಟಿ ಸೌಂದರ್ಯಾ ಅವರು 2004ರ ಏಪ್ರಿಲ್ 17ರಂದು ನಿಧನ ಹೊಂದಿದರು. ಅವರು ಏರಿದ್ದ ಖಾಸಗಿ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹೊತ್ತಿ ಉರಿಯಿತು. ಅವರ ಜೊತೆ ಸಹೋದರ ಅಮರನಾಥ್ ಕೂಡ ನಿಧನ ಹೊಂದಿದರು. ಈ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈಗ ಟಾಲಿವುಡ್ನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಇವರ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಈ ವಿಚಾರ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ.


ಕೌಟುಂಬಿಕ ಸಮಸ್ಯೆ ಕಾರಣದಿಂದ ಮೋನ್ ಬಾಬು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈಗ ಅವರು ಸೌಂದರ್ಯಾ ಸಾವಿನ ಪ್ರಕರಣದಲ್ಲಿ ಸಮಸ್ಯೆ ಎದುರಿಸಿದ್ದಾರೆ. ಆಂಧ್ರ ಪ್ರದೇಶದ ಖಮ್ಮಾಮ್ ಜಿಲ್ಲೆಯಲ್ಲಿ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ಮೋಹನ್ ಬಾಬು ಕೈವಾಡ ಇದೆ ಎಂದು ದೂರಲಾಗಿದೆ. ಚಿಟ್ಟಿಮಲ್ಲು ಎಂಬುವವರು ಈ ದೂರು ನೀಡಿದ್ದಾರೆ.‘ಸೌಂದರ್ಯಾ ಅವರದ್ದು ಆಕಸ್ಮಿಕ ಸಾವಲ್ಲ, ಇದೊಂದು ನಿಯೋಜಿತ ಕೊಲೆ. ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ. ಸೌಂದರ್ಯಾ ಹಾಗೂ ಅವರ ಸಹೋದರ ಅಮರನಾಥ್ ಶಂಶಾಬಾದ್ನಲ್ಲಿರುವ ಆರು ಎಕರೆ ಜಾಗವನ್ನು ಹೊಂದಿದ್ದರು. ಇದನ್ನು ತಮಗೆ ಕೊಡುವಂತೆ ಮೋಹನ್ ಬಾಬು ಕೇಳುತ್ತಿದ್ದರು. ಇದನ್ನು ಮಾರಲು ಸೌಂದರ್ಯಾ ನಿರಾಕರಿಸಿದ್ದರು. ಇದರಿಂದ ಈ ಕೊಲೆ ನಡೆದಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಸೌಂದರ್ಯಾ ಅವರು ಕನ್ನಡ ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ‘ಆಪ್ತಮಿತ್ರ’ ಚಿತ್ರದಲ್ಲಿ ಮಾಡಿದ ನಾಗವಲ್ಲಿ ಪಾತ್ರ ಯಾವಾಗಲೂ ನೆನಪಿನಲ್ಲಿ ಇರುವಂಥದ್ದು. ಅವರು ನಿಧನ ಹೊಂದುವಾಗ ಕೇವಲ 31 ವರ್ಷ ವಯಸ್ಸಾಗಿತ್ತು.


ಸೌಂದರ್ಯಾ ಅವರ ಸಾವಿನ ಬಳಿಕ ಈ ಜಾಗ ಮಾರುವಂತೆ ಅವರ ಕುಟುಂಬದವರಿಗೆ ಮೋಹನ್ ಬಾಬು ಒತ್ತಡ ಹೇರಿದ್ದಾರೆ ಎಂದು ದೂರನಲ್ಲಿ ತಿಳಿಸಲಾಗಿದೆ. ಆ ಬಳಿಕ ಮೋಹನ್ ಬಾಬು ಅವರು ಅಕ್ರಮವಾಗಿ ಈ ಜಾಗವನ್ನು ಪಡೆದುಕೊಂಡರು ಎನ್ನಲಾಗಿದೆ. ಸದ್ಯ ದೂರು ನೀಡಿದ ಚಿಟ್ಟಿಮಲ್ಲು ತಮಗೆ ಪೊಲೀಸ್ ರಕ್ಷಣೆ ಬೇಕು ಎಂದು ಕೋರಿದ್ದಾರೆ. ಅಲ್ಲದೆ ಈ ಜಾಗವನ್ನು ಸರ್ಕಾರದವರು ವಶಕ್ಕೆ ಪಡೆದು ಅಗತ್ಯ ಇರುವ ವೃದ್ಧಾಶ್ರಮದವರಿಗೆ ನೀಡುವಂತೆ ಕೋರಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!