ನಟ ಧನುಷ್ ಪರವಾಗಿ ಕೋರ್ಟ್ನಲ್ಲಿ ತೀರ್ಪು:ನಯನಾತಾರಾಗೆ ಭಾರೀ ಹಿನ್ನಡೆ!

ನಟಿ ನಯನತಾರ ಮತ್ತು ನಟ ಧನುಷ್ ಇಬ್ಬರು ಸಹ ಭಾರತೀಯ ಚಿತ್ರರಂಗದ ಸ್ಟಾರ್ CC ಹಾಗೂ ನಟಿಯರು. ಇಬ್ಬರೂ ಸಹ ದಶಕಗಳಿಂದ ಚಿತ್ರರಂಗದಲ್ಲಿದ್ದಾರೆ. ಇಬ್ಬರಿಗೂ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗ ಇದೆ. ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈಗ ಅವರ ಪರವಾಗಿ ದೊಡ್ಡ ತೀರ್ಪು ಹೊರ ಬಂದಿದೆ.ನಟಿ ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ಕಳೆದ ನವೆಂಬರ್ ತಿಂಗಳಲ್ಲಿ ನಯನತಾರಾ, ಅವರ ಪತಿ ವಿಘ್ನೇಶ್ ಶಿವನ್ ಹಾಗೂ ಇವರ ನಿರ್ಮಾಣ ಸಂಸ್ಥೆ ‘ರೌಡಿ ಪಿಕ್ಚರ್ಸ್’ ವಿರುದ್ಧ ಧನುಷ್ ಅವರು ಕೇಸ್ ಹಾಕಿದ್ದರು. ಧನುಷ್ ಅವರು ನಿರ್ಮಾಣ ಮಾಡಿದ ‘ನಾನುಂ ರೌಡಿ ದಾನ್’ ಚಿತ್ರದ 3 ಸೆಕೆಂಡ್ ದೃಶ್ಯವನ್ನು ‘ನೆಟ್ಫ್ಲಿಕ್ಸ್’ ಡಾಕ್ಯುಮೆಂಟರಿ ‘ನಯನತಾರಾ: ಬಿಯಾಂಡ್ ದಿ ಫೇರೀಟೇಲ್’ನಲ್ಲಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದರು.

ಆದ ಕಾರಣ ‘ಒಪ್ಪಿಗೆ ಇಲ್ಲದೆ ಬಳಸಿದ ದೃಶ್ಯವನ್ನು 24 ಗಂಟೆಯಲ್ಲಿ ತೆಗೆಯದೇ ಇದ್ದರೆ ಕಾನೂನಾತ್ಮಕ ಹೋರಾಟ ಮಾಡಲಾಗುವುದು’ ಎಂದು ಧನುಷ್ ಎಚ್ಚರಿಸಿದ್ದರು. ಆದಾಗ್ಯೂ ದೃಶ್ಯವನ್ನು ತೆಗೆದಿರಲಿಲ್ಲ. ಹೀಗಾಗಿ, ಧನುಷ್ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದರು. ಧನುಷ್ ನಿರ್ಮಾಣ ಸಂಸ್ಥೆ ‘ವುಂಡಬಾರ್ ಫಿಲ್ಮ್ಸ್’ ನಷ್ಟ ಭರಿಸಬೇಕು ಎಂದು ಕೂಡ ಕೋರಿತ್ತು. ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ನಟ ಧನುಷ್ ಹಾಗೂ ನಟಿ ನಯನತಾರಾ ವಿರುದ್ಧ ಕಿತ್ತಾಟಕ್ಕೂ ಇದು ಕಾರಣ ಆಗಿತ್ತು. ಈಗ ಈ ಅರ್ಜಿಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಆದಾಗ್ಯೂ ನಟಿ ನಯನತಾರಾ ‘ನಾನೂಮ್ ರೌಡಿ ದಾನ್’ ಸಿನಿಮಾದ ಹಾಡು, ವಿಡಿಯೋ ತುಣುಕು ಬಳಸಿಕೊಳ್ಳಲು ಎರಡು ವರ್ಷಗಳ ಹಿಂದೇ ಅನುಮತಿ ಕೋರಿದ್ದರು. ಆದರೆ, ಅದಕ್ಕೆ ಧನುಷ್ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಅದೇ ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದರು. ಆದ ಕಾರಣ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ 10 ಕೋಟಿ ರೂಪಾಯಿ ನೊಟೀಸ್ನ ಧನುಷ್ ಕಳುಹಿಸಿದ್ದರು. ಹಾಗಾಗಿ ನಟ ಧನುಷ್ ಪರ ಕೋರ್ಟು ತೀರ್ಪು ನೀಡಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!