ನಟ ಧನುಷ್ ಪರವಾಗಿ ಕೋರ್ಟ್ನಲ್ಲಿ ತೀರ್ಪು:ನಯನಾತಾರಾಗೆ ಭಾರೀ ಹಿನ್ನಡೆ!

ನಟಿ ನಯನತಾರ ಮತ್ತು ನಟ ಧನುಷ್ ಇಬ್ಬರು ಸಹ ಭಾರತೀಯ ಚಿತ್ರರಂಗದ ಸ್ಟಾರ್ CC ಹಾಗೂ ನಟಿಯರು. ಇಬ್ಬರೂ ಸಹ ದಶಕಗಳಿಂದ ಚಿತ್ರರಂಗದಲ್ಲಿದ್ದಾರೆ. ಇಬ್ಬರಿಗೂ ದೊಡ್ಡ ಸಂಖ್ಯೆಯ ಅಭಿಮಾನಿ ವರ್ಗ ಇದೆ. ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈಗ ಅವರ ಪರವಾಗಿ ದೊಡ್ಡ ತೀರ್ಪು ಹೊರ ಬಂದಿದೆ.ನಟಿ ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದೆ. ಕಳೆದ ನವೆಂಬರ್ ತಿಂಗಳಲ್ಲಿ ನಯನತಾರಾ, ಅವರ ಪತಿ ವಿಘ್ನೇಶ್ ಶಿವನ್ ಹಾಗೂ ಇವರ ನಿರ್ಮಾಣ ಸಂಸ್ಥೆ ‘ರೌಡಿ ಪಿಕ್ಚರ್ಸ್’ ವಿರುದ್ಧ ಧನುಷ್ ಅವರು ಕೇಸ್ ಹಾಕಿದ್ದರು. ಧನುಷ್ ಅವರು ನಿರ್ಮಾಣ ಮಾಡಿದ ‘ನಾನುಂ ರೌಡಿ ದಾನ್’ ಚಿತ್ರದ 3 ಸೆಕೆಂಡ್ ದೃಶ್ಯವನ್ನು ‘ನೆಟ್ಫ್ಲಿಕ್ಸ್’ ಡಾಕ್ಯುಮೆಂಟರಿ ‘ನಯನತಾರಾ: ಬಿಯಾಂಡ್ ದಿ ಫೇರೀಟೇಲ್’ನಲ್ಲಿ ಬಳಕೆ ಮಾಡಿದ್ದಾಗಿ ಆರೋಪಿಸಿದ್ದರು.

ಆದ ಕಾರಣ ‘ಒಪ್ಪಿಗೆ ಇಲ್ಲದೆ ಬಳಸಿದ ದೃಶ್ಯವನ್ನು 24 ಗಂಟೆಯಲ್ಲಿ ತೆಗೆಯದೇ ಇದ್ದರೆ ಕಾನೂನಾತ್ಮಕ ಹೋರಾಟ ಮಾಡಲಾಗುವುದು’ ಎಂದು ಧನುಷ್ ಎಚ್ಚರಿಸಿದ್ದರು. ಆದಾಗ್ಯೂ ದೃಶ್ಯವನ್ನು ತೆಗೆದಿರಲಿಲ್ಲ. ಹೀಗಾಗಿ, ಧನುಷ್ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದರು. ಧನುಷ್ ನಿರ್ಮಾಣ ಸಂಸ್ಥೆ ‘ವುಂಡಬಾರ್ ಫಿಲ್ಮ್ಸ್’ ನಷ್ಟ ಭರಿಸಬೇಕು ಎಂದು ಕೂಡ ಕೋರಿತ್ತು. ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ನಟ ಧನುಷ್ ಹಾಗೂ ನಟಿ ನಯನತಾರಾ ವಿರುದ್ಧ ಕಿತ್ತಾಟಕ್ಕೂ ಇದು ಕಾರಣ ಆಗಿತ್ತು. ಈಗ ಈ ಅರ್ಜಿಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಆದಾಗ್ಯೂ ನಟಿ ನಯನತಾರಾ ‘ನಾನೂಮ್ ರೌಡಿ ದಾನ್’ ಸಿನಿಮಾದ ಹಾಡು, ವಿಡಿಯೋ ತುಣುಕು ಬಳಸಿಕೊಳ್ಳಲು ಎರಡು ವರ್ಷಗಳ ಹಿಂದೇ ಅನುಮತಿ ಕೋರಿದ್ದರು. ಆದರೆ, ಅದಕ್ಕೆ ಧನುಷ್ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಅದೇ ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದರು. ಆದ ಕಾರಣ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ 10 ಕೋಟಿ ರೂಪಾಯಿ ನೊಟೀಸ್ನ ಧನುಷ್ ಕಳುಹಿಸಿದ್ದರು. ಹಾಗಾಗಿ ನಟ ಧನುಷ್ ಪರ ಕೋರ್ಟು ತೀರ್ಪು ನೀಡಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!