ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು…

ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ಸಚಿನ್ ಪಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ (CID) ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅವರಿಗೆ ಸಿಬಿಐ (CBI) ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ಕಲಬುರಗಿಗೆ (Kalaburagi) ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರನ್ನು ಮಾಧ್ಯಮಗಳು ಯಾಕೆ ಅಷ್ಟು ಸಿರಿಯಸ್ ಆಗಿ ತೆಗೆದುಕೊಂಡಿದ್ದೀರಿ? ಹೈಕಮಾಂಡ್ ನಾಯಕರೇ ರಾಜ್ಯ ಬಿಜೆಪಿ ನಾಯಕರನ್ನ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಯಡಿಯೂರಪ್ಪ ಫೋಕ್ಸೋ ಪ್ರಕರಣಕ್ಕೆ ನೋಟಿಸ್ ಕೊಟ್ರಾ? ಮುನಿರತ್ನ ಕೇಸ್ ನಲ್ಲಿ ಹೈಕಮಾಂಡ್ ನಾಯಕರು ಏನ್ ಕ್ರಮ ತೆಗೆದುಕೊಂಡಿದ್ದಾರೆ? ಯತ್ನಾಳ್ ವಿರುದ್ದ ಏನ್ ಕ್ರಮ ಆಯ್ತು? ರೇಣುಕಾಚಾರ್ಯ ವಿರುದ್ದ ಏನ್ ಕ್ರಮ ಆಗಿದೆ. ರಾಜ್ಯದ ನಾಯಕರಿಗೆ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರನ್ನು ಲೇವಡಿ ಮಾಡಿದರು.

ರಾಜು ಕಪನೂರು ಪ್ರಿಯಾಂಕ್ ಖರ್ಗೆ ಜೊತೆ ಇದ್ದ ಫೋಟೋ ರಿಲೀಸ್ ಮಾಡಿದ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು, ರಾಜು ಕಪನೂರು ಬಿಜೆಪಿ ನಾಯಕರ ಜೊತೆ ಇದ್ದ ಫೋಟೋ ಬಿಡುಗಡೆ ಮಾಡಿದರು. ರಾಜು ಕಪನೂರು ಬಿಜೆಪಿಯಲ್ಲಿ ಮೊದಲು ಇದ್ದರು. ಫೋಟೋ ಹಲವಾರು ಇವೆ. ಆದರೆ ಸತ್ಯ ಏನು? ರಾಜು ಕಪನೂರು ಪರಿಚಯ ಇಲ್ಲ ಅಂತ ನಾವು ಹೇಳಿಲ್ಲ. ನಟಿಯರ ಡ್ರಗ್ ಕೇಸ್ ನಲ್ಲಿ ನಟಿ ವಿಪಕ್ಷ ನಾಯಕ ಅಶೋಕ್ ಜೊತೆ ನಟಿಯರ ಫೋಟೋ ಇತ್ತು. ಹಾಗಾದ್ರೆ ಅದಕ್ಕೆ ಅಶೋಕ್ ಸಂಬಂಧ ಹೇಳೋಕೆ ಆಗುತ್ತಾ? ಫೋಕ್ಸೋ ಕೇಸ್ನಲ್ಲಿ ಯಡಿಯೂರಪ್ಪ ಯಾಕೆ ರಾಜೀನಾಮೆ ಕೊಟ್ಟಿಲ್ಲ? ಅಕ್ರಮ ಹಣ ದುರ್ಬಳಕೆ ಪ್ರಕರಣದಲ್ಲಿ ವಿಜಯೇಂದ್ರ ಯಾಕೆ ರಾಜೀನಾಮೆ ಕೊಟ್ಟಿಲ್ಲ. ಮೊದಲು ನಿಮ್ಮ ನಾಯಕರಿಗೆ ನೋಟಿಸ್ ಕೊಡಿ ಅಂತ ಕಿಡಿಕಾರಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!